ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಸಂಸದರ ಕ್ರೀಡೋತ್ಸವ ಅಂಗವಾಗಿ ಮೈಸೂರು ವಿ.ವಿ ದೈಹಿಕ ಶಿಕ್ಷಣ ವಿಭಾಗ, ಮೈಸೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ಫೋನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿ, ಸೈಕ್ಲೋಪೀಡಿಯಾ, ಫನ್ ಪ್ಯಾಲೇಸ್, ಸನ್ಪ್ಯೂರ್, ಲಿಟ್ಲ್ ಎಲ್ಲಿ, ಬುಕ್ಸ್ ಅಂಡ್ ಬ್ರೇನ್ಸ್ ಜಂಟಿ ಸಹಯೋಗದಲ್ಲಿ ಮಾನಸಗಂಗೋತ್ರಿಯಲ್ಲಿ ಆಯೋಜಿಸಿದ್ದ ಕಿಡ್ಸ್ ಸೈಕ್ಲೊಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಇದನ್ನು ಓದಿ: ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ : ಗಿಣಿ ಶಾಸ್ತ್ರ ಕೇಳಿದ ಮಂಡ್ಯ ಬಿಜೆಪಿ ನಾಯಕರು
ಫಿಟ್ ಇಂಡಿಯಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಂದೋಲನವಾಗಿದೆ. ಕಿರಿಯ ವಯಸ್ಸಿನಿಂದಲೇ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಪ್ರಧಾನಮಂತ್ರಿಯವರ ಆಶಯದಂತೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ವಿವಿಧ ಕ್ರೀಡೋತ್ಸವ ಆಯೋಜಿಸಲಾಗುತ್ತಿದೆ ಎಂದರು.
ಆರೋಗ್ಯ ಕುರಿತು ಜಾಗೃತಿ ಮೂಡಿಸುವುದು ನಮ್ಮ ಮುಖ್ಯ ಧ್ಯೇಯ. ಕಿರಿಯ ವಯಸ್ಸಿನಿಂದಲೇ ಕ್ರೀಡೆಗೆ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿಯೂ ಪಸರಿಸುವಂತಾಗಲಿದೆ. ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಗಾಧ ಅವಕಾಶವಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಅವರಿಗೆ ವೇದಿಕೆ ಕಲ್ಪಿಸಲು ಬದ್ಧವಿರುವುದಾಗಿ ತಿಳಿಸಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…