ಮೈಸೂರು ನಗರ

ಫಿಟ್‌ ಇಂಡಿಯಾ ಮೂಲಕ ಆರೋಗ್ಯ ಜಾಗೃತಿ : ಸಂಸದ ಯದುವೀರ್‌

ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಸಂಸದರ ಕ್ರೀಡೋತ್ಸವ ಅಂಗವಾಗಿ ಮೈಸೂರು ವಿ.ವಿ ದೈಹಿಕ ಶಿಕ್ಷಣ ವಿಭಾಗ, ಮೈಸೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ಫೋನಿಕ್ಸ್ ಇಂಟರ್‌ನ್ಯಾಷನಲ್ ಅಕಾಡೆಮಿ, ಸೈಕ್ಲೋಪೀಡಿಯಾ, ಫನ್ ಪ್ಯಾಲೇಸ್, ಸನ್‌ಪ್ಯೂರ್, ಲಿಟ್ಲ್ ಎಲ್ಲಿ, ಬುಕ್ಸ್ ಅಂಡ್ ಬ್ರೇನ್ಸ್ ಜಂಟಿ ಸಹಯೋಗದಲ್ಲಿ ಮಾನಸಗಂಗೋತ್ರಿಯಲ್ಲಿ ಆಯೋಜಿಸಿದ್ದ ಕಿಡ್ಸ್ ಸೈಕ್ಲೊಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಇದನ್ನು ಓದಿ: ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ : ಗಿಣಿ ಶಾಸ್ತ್ರ ಕೇಳಿದ ಮಂಡ್ಯ ಬಿಜೆಪಿ ನಾಯಕರು

ಫಿಟ್ ಇಂಡಿಯಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಂದೋಲನವಾಗಿದೆ. ಕಿರಿಯ ವಯಸ್ಸಿನಿಂದಲೇ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಪ್ರಧಾನಮಂತ್ರಿಯವರ ಆಶಯದಂತೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ವಿವಿಧ ಕ್ರೀಡೋತ್ಸವ ಆಯೋಜಿಸಲಾಗುತ್ತಿದೆ ಎಂದರು.

ಆರೋಗ್ಯ ಕುರಿತು ಜಾಗೃತಿ ಮೂಡಿಸುವುದು ನಮ್ಮ ಮುಖ್ಯ ಧ್ಯೇಯ. ಕಿರಿಯ ವಯಸ್ಸಿನಿಂದಲೇ ಕ್ರೀಡೆಗೆ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿಯೂ ಪಸರಿಸುವಂತಾಗಲಿದೆ. ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಗಾಧ ಅವಕಾಶವಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಅವರಿಗೆ ವೇದಿಕೆ ಕಲ್ಪಿಸಲು ಬದ್ಧವಿರುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago