ಮೈಸೂರು ನಗರ

ಫಾರೂಕಿಯಾ ದಂತ ಕಾಲೇಜು ವತಿಯಿಂದ ಆರೋಗ್ಯ ಮ್ಯಾರಥಾನ್

ಮೈಸೂರು: ಮೈಸೂರಿನ ಫಾರೂಕಿಯಾ ದಂತ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ಕ್ರೀಡಾ ಮ್ಯಾರಥಾನ್ ನಡಿಗೆ ಹಮ್ಮಿಕೊಂಡು ಸಾರ್ವಜನಿಕರಿಗೆ ದಂತ ಆರೋಗ್ಯದ ಅರಿವು ಹಾಗೂ ಉಚಿತ ತಪಾಸಣೆ ಆಯೋಜಿಸಲಾಗಿತ್ತು.

ಇಂದು (ಫೆ.7) ನಗರದ ಕೆ.ಆರ್. ಆಸ್ಪತ್ರೆ ವೃತ್ತದಿಂದ ಆರಂಭಗೊಂಡ ಮ್ಯಾರಥಾನ್ ನಡಿಗೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರಸ್ತುತ ಯಾಂತ್ರಿಕ ಮತ್ತು ಒತ್ತಡದ ಜೀವನ‌ದಿಂದಾಗಿ ಮನುಷ್ಯನಿಗೆ ಆರೋಗ್ಯ ರಕ್ಷಣೆ ದೊಡ್ಡ ಸವಾಲಾಗಿದ್ದು ಮೈಸೂರಿನ ಪ್ರತಿಷ್ಠಿತ ಫಾರೂಕಿಯಾ ಸಂಸ್ಥೆ ಬಡ ಮತ್ತು ಮಧ್ಯಮ ವರ್ಗಗಳಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಒದಗಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ಕೆ.ಸಿ. ಶಶಿಧರ್ ಮಾತನಾಡಿ, ಮನುಷ್ಯ ಆರೋಗ್ಯವಾಗಿರಲು ದಂತ ಆರೋಗ್ಯ ಅತೀ ಮುಖ್ಯ. ಇದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಈ ದಿಸೆಯಲ್ಲಿ ಫಾರೂಕಿಯಾ ದಂತ ಕಾಲೇಜು ಮತ್ತು ‌ಆಸ್ಪತ್ರೆ ಹಮ್ಮಿಕೊಂಡಿರುವ ಆರೋಗ್ಯ ಮ್ಯಾರಥಾನ್ ಜನರಿಗೆ ಉಪಯುಕ್ತವಾಗಲಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಹೆಚ.ಪಿ. ಶ್ರೀನಾಥ್ ಮಾತನಾಡಿ, ತಮ್ಮ ಸಂಸ್ಥೆಯ ವತಿಯಿಂದ ಮಾರ್ಚ್ ಅಂತ್ಯದವರೆಗೂ ಉಚಿತ ದಂಡ ತಪಾಸಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸುಮಾರು 2 ಸಾವಿರ ಮಂದಿಗೆ ಈ ಅವಕಾಶ ದೊರಕಿದೆ. ಅಗತ್ಯವಿದ್ದಲ್ಲಿ ಚಿಕಿತ್ಸೆಗೂ ತಮ್ಮ ಸಂಸ್ಥೆ ಮುಂದಾಗಲಿದೆ ಎಂದು ಮಾಹಿತಿ ನೀಡಿದರು.

ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಸಂದೀಪ್ ಕೆ.ಟಿ. ಪ್ರಾಂಶುಪಾಲರಾದ ಡಾ. ಸಂಜಯ್ ಮುರುಗೋಡ್ ಮತ್ತು ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

21 mins ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

42 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

2 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

3 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

4 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

5 hours ago