ಮೈಸೂರು ನಗರ

ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಮೈಸೂರು :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್  ಸರ್ಕಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಿ, ಆಗಸ್ಟ್ ನಿಂದ ಪೂರ್ಣಪ್ರಮಾಣದ ಸೇವೆಗಳನ್ನು ಇನ್ನಷ್ಟು ಹೆಚ್ಚಿಸುವಂತೆ ಹಿರಿಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಮತ್ತಷ್ಟು ಮೂಲಸೌಕರ್ಯಗಳ ವೃದ್ಧಿಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಆನಂತರ, ಕೆ.ಆರ್. ಆಸ್ಪತ್ರೆಗೂ ಭೇಟಿ ನೀಡಿದ ಅವರು, ಟೆಲಿ ಐಸಿಯು ಸೇವೆಯನ್ನು ತಾಲೂಕುಗಳಿಗೂ ವಿಸ್ತರಣೆ ಮಾಡಬೇಕೆಂದು ಸೂಚನೆ ನೀಡಿದರು.

ನಗರದ ಜಿಲ್ಲಾಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಿಗೂ ಭೇಟಿ ನೀಡಿ ಅಲ್ಲಿರುವಂತಹ ರೋಗಿಗಳ‌ ಯೋಗಕ್ಷೇಮ ವಿಚಾರಿಸಿದರು. ನಂತರ ಆರೋಗ್ಯ ಸಿಬ್ಬಂದಿಗಳ ಜೊತೆ ಚರ್ಚಿಸಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮ ಅನುಸರಿಸುವಂತೆ ಸೂಚಿಸಿದರು.

ಡಯಾಲಿಸಿಸ್‌ ಕೇಂದ್ರ ಹಾಗೂ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳನ್ನು ಭೇಟಿ ಮಾಡಿ, ಕುಂದು ಕೊರತೆ ಆಲಿಸಿದರು.

ಆನಂತರ, ಡಿಎಚ್‌ಒ ಡಾ ಪಿ. ಸಿ. ಕುಮಾರಸ್ವಾಮಿ ಅವರಿಂದ ಸಿಬ್ಬಂದಿಗಳ ಕೊರತೆಯ ಬಗ್ಗೆ ಮಾಹಿತಿ ಪಡೆದರು.

ಆಂದೋಲನ ಡೆಸ್ಕ್

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

9 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

11 hours ago