Heart attack cases increase
ಮೈಸೂರು: ರಾಜ್ಯದಿಂದ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ.
ಆಸ್ಪತ್ರೆಗೆ ಬೆಳ್ಳಂಬೆಳಿಗ್ಗೆಯೇ ಆಗಮಿಸುತ್ತಿರುವ ಜನರು ಕೌಂಟರ್ ಹಾಗೂ ಇನ್ನಿತರೆ ಕೊಠಡಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಸಾಮಾನ್ಯ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವರು ಕೂಡ ಸ್ಥಳೀಯ ಆಸ್ಪತ್ರೆಗೆ ಹೋಗುವ ಬದಲು ನೇರವಾಗಿ ಜಯದೇವ ಆಸ್ಪತ್ರೆಗೆ ಬರುತ್ತಿದ್ದಾರೆ.
ಹೃದಯಾಘಾತಕ್ಕಿಂತ ಹೆಚ್ಚಾಗಿ ಅದರ ಭಯದಲ್ಲೇ ಹೆಚ್ಚಿನ ಜನರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿರುವವರಿಗೆ ತೀವ್ರ ಸಮಸ್ಯೆ ಉಂಟಾಗಿದೆ.
ಪ್ರತಿನಿತ್ಯ ಮೈಸೂರು ಜಿಲ್ಲೆ ಸೇರಿದಂತೆ ಹೊರಗಡೆ ಜಿಲ್ಲೆಗಳಿಂದ 400 ರಿಂದ 500 ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದು, ಆಸ್ಪತ್ರೆ ಸಿಬ್ಬಂದಿ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…