ಮೈಸೂರು ನಗರ

ಮೈಸೂರು | ಭಾರಿ ಮಳೆ ; ಕೆಆರ್ ಠಾಣೆಗೆ ನುಗ್ಗಿದ ನೀರು

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ.

ಇದರ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಠಾಣೆಯ ಒಳಗೆ ತೆರಳಲು ಪೊಲೀಸರಿಗೂ ಸಾಧ್ಯವಾಗಲಿಲ್ಲ. ಠಾಣೆಯ ಮುಂದೆ ಅವೈಜ್ಞಾನಿಕ ಮೋರಿ ಕಾಮಗಾರಿ ನಡೆದಿರುವುದರಿಂದ ಮಳೆ ಬಂದಾಗ ಈ ಸಮಸ್ಯೆ ಮಾಮೂಲು ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ.

ಉಕ್ಕಿ ಹರಿದ ಮ್ಯಾನ್ ಹೋಲ್: ಇನ್ನು ನಗರದ ಅಗ್ರಹಾರ, ಚಾಮರಾಜ ಜೋಡಿ ರಸ್ತೆಯ ಕೆಲವೆಡೆ ಮ್ಯಾನ್ ಹೋಲ್ ಉಕ್ಕಿ ಹರಿದ ಪರಿಣಾಮ ರಸ್ತೆಯಲ್ಲಿ ಕೊಳಚೆ ನೀರು ಹರಿಯುವಂತಾಗಿತ್ತು. ಪೌರ ಕಾರ್ಮಿಕರು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಸರಿಪಡಿಸುತ್ತಿದ್ದುದು ಕಂಡುಬಂತು.

ಜೋರು ಮಳೆಗೆ ನಗರದ ಅನೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತಾದರೂ ಸೆಸ್ಕ್ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ದುರಸ್ತಿಗೊಳಿಸುತ್ತಿದ್ದುದು ಕಂಡುಬಂತು.

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ವೈಮಾನಿಕ ದಾಳಿಗೆ ನಲುಗಿದ ಟೆಹರಾನ್‌ ಏರ್‌ಪೋರ್ಟ್‌

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…

3 mins ago

ವರುಣಾ ಕ್ಷೇತ್ರದಲ್ಲಿ ದಂಡಿಮಾರಮ್ಮ ದೇವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…

16 mins ago

ಸೆಸ್ಕ್‌ನಲ್ಲಿ ಅರ್ಥಗರ್ಭಿತ ಲೈನ್‌ಮ್ಯಾನ್ ದಿವಸ್‌ ಆಚರಣೆ

‌ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ…

24 mins ago

ಸಾಮರಸ್ಯ ಮತ್ತು ಸಮಾನತೆ ಭಾವನೆಯ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…

33 mins ago

ಕೇಂದ್ರದ ಸಾಲದ ನೀತಿ ಟೀಕಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…

1 hour ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

1 hour ago