ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ.
ಇದರ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಠಾಣೆಯ ಒಳಗೆ ತೆರಳಲು ಪೊಲೀಸರಿಗೂ ಸಾಧ್ಯವಾಗಲಿಲ್ಲ. ಠಾಣೆಯ ಮುಂದೆ ಅವೈಜ್ಞಾನಿಕ ಮೋರಿ ಕಾಮಗಾರಿ ನಡೆದಿರುವುದರಿಂದ ಮಳೆ ಬಂದಾಗ ಈ ಸಮಸ್ಯೆ ಮಾಮೂಲು ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ.
ಉಕ್ಕಿ ಹರಿದ ಮ್ಯಾನ್ ಹೋಲ್: ಇನ್ನು ನಗರದ ಅಗ್ರಹಾರ, ಚಾಮರಾಜ ಜೋಡಿ ರಸ್ತೆಯ ಕೆಲವೆಡೆ ಮ್ಯಾನ್ ಹೋಲ್ ಉಕ್ಕಿ ಹರಿದ ಪರಿಣಾಮ ರಸ್ತೆಯಲ್ಲಿ ಕೊಳಚೆ ನೀರು ಹರಿಯುವಂತಾಗಿತ್ತು. ಪೌರ ಕಾರ್ಮಿಕರು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಸರಿಪಡಿಸುತ್ತಿದ್ದುದು ಕಂಡುಬಂತು.
ಜೋರು ಮಳೆಗೆ ನಗರದ ಅನೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತಾದರೂ ಸೆಸ್ಕ್ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ದುರಸ್ತಿಗೊಳಿಸುತ್ತಿದ್ದುದು ಕಂಡುಬಂತು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…