ಮೈಸೂರು ನಗರ

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ‘ಫ್ಲ್ಯಾಶ್ ಮೊಬ್’ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ ನಗರದ ಪೂರ್ಣಚೇತನ ಶಾಲೆಯ ೧೭೦ ಮಕ್ಕಳು ೧೪ ಚಾರಿತ್ರಿಕ, ಜಾನಪದ, ದೇಶ ಪ್ರೇಮದ ಗೀತೆಗಳ ಮೂಲಕ ಹೊಸ ಲೋಕಕ್ಕೆ ನೋಡುಗರನ್ನು ಕೊಂಡೊಯ್ದರು.

ಫ್ಲ್ಯಾಶ್ ಮೊಬ್ ಬಳಿಕ, ನಗರದ ಇತಿಹಾಸ, ಪರಂಪರೆ ಆಧಾರಿತ ಹೆರಿಟೇಜ್ ಟ್ರೆಷರ್ ಹಂಟ್ ಅನ್ನು ಖ್ಯಾತ ಮೂಳೆ ತಜ್ಞ ಡಾ.ಟಿ.ಎನ್.ಬಾಲಕೃಷ್ಣೇ ಗೌಡ ಉದ್ಘಾಟಿಸಿ, ಈ ಹೆರಿಟೇಜ್ ಟ್ರೆಷರ್ ಹಂಟ್ ನ ವಿಜೇತರಿಗೆ ಬಿ.ಕೆ.ಜಿ. ಆವಾಂತ ಆಸ್ಪತ್ರೆಯಲ್ಲಿ ಐದು ಸಾವಿರ ರೂಪಾಯಿಗಳ ಉಚಿತ ವೈದ್ಯಕೀಯ ಪರೀಕ್ಷೆಗಳನ್ನು ಘೋಷಿಸಿದರು.

ಇದನ್ನು ಓದಿ: ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಖ್ಯಾತ ಶ್ವಾಸಕೋಶ ತಜ್ಞ ಡಾ.ಲಕ್ಷ್ಮೀನರಸಿಂಹನ್ ಮಾತನಾಡಿದರು.

ಭಾಗವಹಿಸಿದ ಪ್ರತೀ ತಂಡಕ್ಕೂ ಕಾರ್ಯಕ್ರಮದ ಆರಂಭದಲ್ಲೇ ೧೦ ಸುಳಿವುಗಳನ್ನು ಒಳಗೊಂಡ ವಿಶೇಷ ಟ್ರೆಷರ್ ಕಿಟ್ ನೀಡಲಾಗಿತ್ತು. ಚೆಲುವಾಂಬ ಮ್ಯಾನ್ಷನ್, ರೈಲ್ವೆ ನಿಲ್ದಾಣ, ಓಆರ್‌ಐ, ಕ್ರಾಫರ್ಡ್ ಹಾಲ್, ಜಿಲ್ಲಾಧಿಕಾರಿ ಹಳೆ ಕಚೇರಿ, ಪುರಭವನ ಹೀಗೆ ನಗರದ ಪ್ರಮುಖ ಪಾರಂಪರಿಕ ಸ್ಥಳಗಳನ್ನು ಪತ್ತೆ ಹೆಚ್ಚುವ ಸವಾಲು ಒಡ್ಡಲಾಗಿತ್ತು.

೧ ಗಂಟೆ ೧೮ ನಿಮಿಷದಲ್ಲಿ ಈ ಸವಾಲು ಪೂರ್ತಿ ಮಾಡಿದ ಪೂರ್ಣ ಚೇತನ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಹೃದ್ಯ ಹಾಗೂ ಆಕೆಯ ತಂದೆ ಭುವನೇಶ್ವರ್ ಪ್ರಥಮ ಸ್ಥಾನ ಪಡೆದರು. ಆಟೋ ಮೂಲಕ ಅವರು ಈ ಸವಾಲು ಪೂರ್ತಿಗೊಳಿಸಿದರು. ಅದೇ ಶಾಲೆಯ ಏಳನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಆರೋಹಿ ಸಿಂಗ್ ಹಾಗೂ ಆಕೆಯ ತಂದೆ ಸಂತೋಷ್ ಕುಮಾರ್ ಸಿಂಗ್ ದ್ವಿತೀಯ ಪ್ರಶಸ್ತಿ ಪಡೆದರು. ಕೆ.ಆರ್. ನಗರದ ವಾಸವಿ ಸಾಂಸ್ಕೃತಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಋತ್ವಿ ಹಾಗು ತೇಜೇಶ್ ಗೌಡ ತೃತೀಯ ಸ್ಥಾನ ಪಡೆದರು. ಕ್ರಮವಾಗಿ ೧೦,೦೦೦,೭,೫೦೦ ಮತ್ತು ೫,೦೦೦ ರೂ. ನಗದು ಬಹುಮಾನ ಹಾಗೂ ಟ್ರೋಫಿ ವಿತರಿಸಲಾಯಿತು. ಶಾಲೆಯ ಸಿಇಒ ದರ್ಶನ್ ರಾಜ್, ಮುಖ್ಯಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ, ಕಾರ್ಯದರ್ಶಿ ಡಾ.ರಜಿನಿ, ಟ್ರಸ್ಟಿ ಪ್ರವೀಣ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

6 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

6 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

6 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

6 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

6 hours ago