ಮೈಸೂರು ನಗರ

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ‘ಫ್ಲ್ಯಾಶ್ ಮೊಬ್’ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ ನಗರದ ಪೂರ್ಣಚೇತನ ಶಾಲೆಯ ೧೭೦ ಮಕ್ಕಳು ೧೪ ಚಾರಿತ್ರಿಕ, ಜಾನಪದ, ದೇಶ ಪ್ರೇಮದ ಗೀತೆಗಳ ಮೂಲಕ ಹೊಸ ಲೋಕಕ್ಕೆ ನೋಡುಗರನ್ನು ಕೊಂಡೊಯ್ದರು.

ಫ್ಲ್ಯಾಶ್ ಮೊಬ್ ಬಳಿಕ, ನಗರದ ಇತಿಹಾಸ, ಪರಂಪರೆ ಆಧಾರಿತ ಹೆರಿಟೇಜ್ ಟ್ರೆಷರ್ ಹಂಟ್ ಅನ್ನು ಖ್ಯಾತ ಮೂಳೆ ತಜ್ಞ ಡಾ.ಟಿ.ಎನ್.ಬಾಲಕೃಷ್ಣೇ ಗೌಡ ಉದ್ಘಾಟಿಸಿ, ಈ ಹೆರಿಟೇಜ್ ಟ್ರೆಷರ್ ಹಂಟ್ ನ ವಿಜೇತರಿಗೆ ಬಿ.ಕೆ.ಜಿ. ಆವಾಂತ ಆಸ್ಪತ್ರೆಯಲ್ಲಿ ಐದು ಸಾವಿರ ರೂಪಾಯಿಗಳ ಉಚಿತ ವೈದ್ಯಕೀಯ ಪರೀಕ್ಷೆಗಳನ್ನು ಘೋಷಿಸಿದರು.

ಇದನ್ನು ಓದಿ: ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಖ್ಯಾತ ಶ್ವಾಸಕೋಶ ತಜ್ಞ ಡಾ.ಲಕ್ಷ್ಮೀನರಸಿಂಹನ್ ಮಾತನಾಡಿದರು.

ಭಾಗವಹಿಸಿದ ಪ್ರತೀ ತಂಡಕ್ಕೂ ಕಾರ್ಯಕ್ರಮದ ಆರಂಭದಲ್ಲೇ ೧೦ ಸುಳಿವುಗಳನ್ನು ಒಳಗೊಂಡ ವಿಶೇಷ ಟ್ರೆಷರ್ ಕಿಟ್ ನೀಡಲಾಗಿತ್ತು. ಚೆಲುವಾಂಬ ಮ್ಯಾನ್ಷನ್, ರೈಲ್ವೆ ನಿಲ್ದಾಣ, ಓಆರ್‌ಐ, ಕ್ರಾಫರ್ಡ್ ಹಾಲ್, ಜಿಲ್ಲಾಧಿಕಾರಿ ಹಳೆ ಕಚೇರಿ, ಪುರಭವನ ಹೀಗೆ ನಗರದ ಪ್ರಮುಖ ಪಾರಂಪರಿಕ ಸ್ಥಳಗಳನ್ನು ಪತ್ತೆ ಹೆಚ್ಚುವ ಸವಾಲು ಒಡ್ಡಲಾಗಿತ್ತು.

೧ ಗಂಟೆ ೧೮ ನಿಮಿಷದಲ್ಲಿ ಈ ಸವಾಲು ಪೂರ್ತಿ ಮಾಡಿದ ಪೂರ್ಣ ಚೇತನ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಹೃದ್ಯ ಹಾಗೂ ಆಕೆಯ ತಂದೆ ಭುವನೇಶ್ವರ್ ಪ್ರಥಮ ಸ್ಥಾನ ಪಡೆದರು. ಆಟೋ ಮೂಲಕ ಅವರು ಈ ಸವಾಲು ಪೂರ್ತಿಗೊಳಿಸಿದರು. ಅದೇ ಶಾಲೆಯ ಏಳನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಆರೋಹಿ ಸಿಂಗ್ ಹಾಗೂ ಆಕೆಯ ತಂದೆ ಸಂತೋಷ್ ಕುಮಾರ್ ಸಿಂಗ್ ದ್ವಿತೀಯ ಪ್ರಶಸ್ತಿ ಪಡೆದರು. ಕೆ.ಆರ್. ನಗರದ ವಾಸವಿ ಸಾಂಸ್ಕೃತಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಋತ್ವಿ ಹಾಗು ತೇಜೇಶ್ ಗೌಡ ತೃತೀಯ ಸ್ಥಾನ ಪಡೆದರು. ಕ್ರಮವಾಗಿ ೧೦,೦೦೦,೭,೫೦೦ ಮತ್ತು ೫,೦೦೦ ರೂ. ನಗದು ಬಹುಮಾನ ಹಾಗೂ ಟ್ರೋಫಿ ವಿತರಿಸಲಾಯಿತು. ಶಾಲೆಯ ಸಿಇಒ ದರ್ಶನ್ ರಾಜ್, ಮುಖ್ಯಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ, ಕಾರ್ಯದರ್ಶಿ ಡಾ.ರಜಿನಿ, ಟ್ರಸ್ಟಿ ಪ್ರವೀಣ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

10 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

10 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

10 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

10 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

11 hours ago