ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ‘ಫ್ಲ್ಯಾಶ್ ಮೊಬ್’ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ ನಗರದ ಪೂರ್ಣಚೇತನ ಶಾಲೆಯ ೧೭೦ ಮಕ್ಕಳು ೧೪ ಚಾರಿತ್ರಿಕ, ಜಾನಪದ, ದೇಶ ಪ್ರೇಮದ ಗೀತೆಗಳ ಮೂಲಕ ಹೊಸ ಲೋಕಕ್ಕೆ ನೋಡುಗರನ್ನು ಕೊಂಡೊಯ್ದರು.
ಫ್ಲ್ಯಾಶ್ ಮೊಬ್ ಬಳಿಕ, ನಗರದ ಇತಿಹಾಸ, ಪರಂಪರೆ ಆಧಾರಿತ ಹೆರಿಟೇಜ್ ಟ್ರೆಷರ್ ಹಂಟ್ ಅನ್ನು ಖ್ಯಾತ ಮೂಳೆ ತಜ್ಞ ಡಾ.ಟಿ.ಎನ್.ಬಾಲಕೃಷ್ಣೇ ಗೌಡ ಉದ್ಘಾಟಿಸಿ, ಈ ಹೆರಿಟೇಜ್ ಟ್ರೆಷರ್ ಹಂಟ್ ನ ವಿಜೇತರಿಗೆ ಬಿ.ಕೆ.ಜಿ. ಆವಾಂತ ಆಸ್ಪತ್ರೆಯಲ್ಲಿ ಐದು ಸಾವಿರ ರೂಪಾಯಿಗಳ ಉಚಿತ ವೈದ್ಯಕೀಯ ಪರೀಕ್ಷೆಗಳನ್ನು ಘೋಷಿಸಿದರು.
ಇದನ್ನು ಓದಿ: ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ
ಖ್ಯಾತ ಶ್ವಾಸಕೋಶ ತಜ್ಞ ಡಾ.ಲಕ್ಷ್ಮೀನರಸಿಂಹನ್ ಮಾತನಾಡಿದರು.
ಭಾಗವಹಿಸಿದ ಪ್ರತೀ ತಂಡಕ್ಕೂ ಕಾರ್ಯಕ್ರಮದ ಆರಂಭದಲ್ಲೇ ೧೦ ಸುಳಿವುಗಳನ್ನು ಒಳಗೊಂಡ ವಿಶೇಷ ಟ್ರೆಷರ್ ಕಿಟ್ ನೀಡಲಾಗಿತ್ತು. ಚೆಲುವಾಂಬ ಮ್ಯಾನ್ಷನ್, ರೈಲ್ವೆ ನಿಲ್ದಾಣ, ಓಆರ್ಐ, ಕ್ರಾಫರ್ಡ್ ಹಾಲ್, ಜಿಲ್ಲಾಧಿಕಾರಿ ಹಳೆ ಕಚೇರಿ, ಪುರಭವನ ಹೀಗೆ ನಗರದ ಪ್ರಮುಖ ಪಾರಂಪರಿಕ ಸ್ಥಳಗಳನ್ನು ಪತ್ತೆ ಹೆಚ್ಚುವ ಸವಾಲು ಒಡ್ಡಲಾಗಿತ್ತು.
೧ ಗಂಟೆ ೧೮ ನಿಮಿಷದಲ್ಲಿ ಈ ಸವಾಲು ಪೂರ್ತಿ ಮಾಡಿದ ಪೂರ್ಣ ಚೇತನ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಹೃದ್ಯ ಹಾಗೂ ಆಕೆಯ ತಂದೆ ಭುವನೇಶ್ವರ್ ಪ್ರಥಮ ಸ್ಥಾನ ಪಡೆದರು. ಆಟೋ ಮೂಲಕ ಅವರು ಈ ಸವಾಲು ಪೂರ್ತಿಗೊಳಿಸಿದರು. ಅದೇ ಶಾಲೆಯ ಏಳನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಆರೋಹಿ ಸಿಂಗ್ ಹಾಗೂ ಆಕೆಯ ತಂದೆ ಸಂತೋಷ್ ಕುಮಾರ್ ಸಿಂಗ್ ದ್ವಿತೀಯ ಪ್ರಶಸ್ತಿ ಪಡೆದರು. ಕೆ.ಆರ್. ನಗರದ ವಾಸವಿ ಸಾಂಸ್ಕೃತಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಋತ್ವಿ ಹಾಗು ತೇಜೇಶ್ ಗೌಡ ತೃತೀಯ ಸ್ಥಾನ ಪಡೆದರು. ಕ್ರಮವಾಗಿ ೧೦,೦೦೦,೭,೫೦೦ ಮತ್ತು ೫,೦೦೦ ರೂ. ನಗದು ಬಹುಮಾನ ಹಾಗೂ ಟ್ರೋಫಿ ವಿತರಿಸಲಾಯಿತು. ಶಾಲೆಯ ಸಿಇಒ ದರ್ಶನ್ ರಾಜ್, ಮುಖ್ಯಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ, ಕಾರ್ಯದರ್ಶಿ ಡಾ.ರಜಿನಿ, ಟ್ರಸ್ಟಿ ಪ್ರವೀಣ್ ಹಾಜರಿದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…