ಮೈಸೂರು ನಗರ

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ‘ಫ್ಲ್ಯಾಶ್ ಮೊಬ್’ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ ನಗರದ ಪೂರ್ಣಚೇತನ ಶಾಲೆಯ ೧೭೦ ಮಕ್ಕಳು ೧೪ ಚಾರಿತ್ರಿಕ, ಜಾನಪದ, ದೇಶ ಪ್ರೇಮದ ಗೀತೆಗಳ ಮೂಲಕ ಹೊಸ ಲೋಕಕ್ಕೆ ನೋಡುಗರನ್ನು ಕೊಂಡೊಯ್ದರು.

ಫ್ಲ್ಯಾಶ್ ಮೊಬ್ ಬಳಿಕ, ನಗರದ ಇತಿಹಾಸ, ಪರಂಪರೆ ಆಧಾರಿತ ಹೆರಿಟೇಜ್ ಟ್ರೆಷರ್ ಹಂಟ್ ಅನ್ನು ಖ್ಯಾತ ಮೂಳೆ ತಜ್ಞ ಡಾ.ಟಿ.ಎನ್.ಬಾಲಕೃಷ್ಣೇ ಗೌಡ ಉದ್ಘಾಟಿಸಿ, ಈ ಹೆರಿಟೇಜ್ ಟ್ರೆಷರ್ ಹಂಟ್ ನ ವಿಜೇತರಿಗೆ ಬಿ.ಕೆ.ಜಿ. ಆವಾಂತ ಆಸ್ಪತ್ರೆಯಲ್ಲಿ ಐದು ಸಾವಿರ ರೂಪಾಯಿಗಳ ಉಚಿತ ವೈದ್ಯಕೀಯ ಪರೀಕ್ಷೆಗಳನ್ನು ಘೋಷಿಸಿದರು.

ಇದನ್ನು ಓದಿ: ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಖ್ಯಾತ ಶ್ವಾಸಕೋಶ ತಜ್ಞ ಡಾ.ಲಕ್ಷ್ಮೀನರಸಿಂಹನ್ ಮಾತನಾಡಿದರು.

ಭಾಗವಹಿಸಿದ ಪ್ರತೀ ತಂಡಕ್ಕೂ ಕಾರ್ಯಕ್ರಮದ ಆರಂಭದಲ್ಲೇ ೧೦ ಸುಳಿವುಗಳನ್ನು ಒಳಗೊಂಡ ವಿಶೇಷ ಟ್ರೆಷರ್ ಕಿಟ್ ನೀಡಲಾಗಿತ್ತು. ಚೆಲುವಾಂಬ ಮ್ಯಾನ್ಷನ್, ರೈಲ್ವೆ ನಿಲ್ದಾಣ, ಓಆರ್‌ಐ, ಕ್ರಾಫರ್ಡ್ ಹಾಲ್, ಜಿಲ್ಲಾಧಿಕಾರಿ ಹಳೆ ಕಚೇರಿ, ಪುರಭವನ ಹೀಗೆ ನಗರದ ಪ್ರಮುಖ ಪಾರಂಪರಿಕ ಸ್ಥಳಗಳನ್ನು ಪತ್ತೆ ಹೆಚ್ಚುವ ಸವಾಲು ಒಡ್ಡಲಾಗಿತ್ತು.

೧ ಗಂಟೆ ೧೮ ನಿಮಿಷದಲ್ಲಿ ಈ ಸವಾಲು ಪೂರ್ತಿ ಮಾಡಿದ ಪೂರ್ಣ ಚೇತನ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಹೃದ್ಯ ಹಾಗೂ ಆಕೆಯ ತಂದೆ ಭುವನೇಶ್ವರ್ ಪ್ರಥಮ ಸ್ಥಾನ ಪಡೆದರು. ಆಟೋ ಮೂಲಕ ಅವರು ಈ ಸವಾಲು ಪೂರ್ತಿಗೊಳಿಸಿದರು. ಅದೇ ಶಾಲೆಯ ಏಳನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಆರೋಹಿ ಸಿಂಗ್ ಹಾಗೂ ಆಕೆಯ ತಂದೆ ಸಂತೋಷ್ ಕುಮಾರ್ ಸಿಂಗ್ ದ್ವಿತೀಯ ಪ್ರಶಸ್ತಿ ಪಡೆದರು. ಕೆ.ಆರ್. ನಗರದ ವಾಸವಿ ಸಾಂಸ್ಕೃತಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಋತ್ವಿ ಹಾಗು ತೇಜೇಶ್ ಗೌಡ ತೃತೀಯ ಸ್ಥಾನ ಪಡೆದರು. ಕ್ರಮವಾಗಿ ೧೦,೦೦೦,೭,೫೦೦ ಮತ್ತು ೫,೦೦೦ ರೂ. ನಗದು ಬಹುಮಾನ ಹಾಗೂ ಟ್ರೋಫಿ ವಿತರಿಸಲಾಯಿತು. ಶಾಲೆಯ ಸಿಇಒ ದರ್ಶನ್ ರಾಜ್, ಮುಖ್ಯಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ, ಕಾರ್ಯದರ್ಶಿ ಡಾ.ರಜಿನಿ, ಟ್ರಸ್ಟಿ ಪ್ರವೀಣ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

8 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

11 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

11 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

12 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

14 hours ago