ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಪೊಲೀಸರು ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಹಲವು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಚಾಮುಂಡಿ ಚಲೋ ಹೋರಾಟದಲ್ಲಿ ಭಾಗಿಯಾಗಲು ಆಗಮಿಸಿದ್ದ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಸಂದೇಶ ಸ್ವಾಮಿ ನೇತೃತ್ವದಲ್ಲಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಚಾಮುಂಡಿ ಬೆಟ್ಟದತ್ತ ತೆರಳಿದ್ದರು. ಈ ವೇಳೆ ಪೊಲೀರು ಬೆಟ್ಟಕ್ಕೆ ತೆರಳಲು ಬಿಟ್ಟಿಲ್ಲ.
ಇದರಿಂದ ತೀವ್ರ ಆಕ್ರೋಶಗೊಂಡ ಹೋರಾಟಗಾರರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ ಪೊಲೀಸರ ನಡೆಗೆ ಎಲ್.ನಾಗೇಂದ್ರ ಕಿಡಿಕಾರಿದ್ದಾರೆ. ಪೊಲೀಸರನ್ನು ಬಳಸಿ ಹೋರಾಟ ಹತ್ತಿಕ್ಕಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಪೊಲೀಸರು ನಾಗೇಂದ್ರ, ಬಿಜೆಪಿ ಮುಖಂಡ ಶುಶ್ರುತ್ ಗೌಡ ಸೇರಿದಂತೆ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…