ಮೈಸೂರು ನಗರ

ಧರ್ಮಸ್ಥಳ ಪ್ರಕರಣ: ಸತ್ಯ ಹೊರ ಬರಲೆಂದೇ ಎಸ್‌ಐಟಿ ರಚನೆ ಎಂದ ಹೋಂ ಮಿನಿಸ್ಟರ್‌

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಹೊರ ಬರಲೆಂದೇ ನಾವು ಎಸ್‌ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಉತ್ತರ ಕೊಟ್ಟಿದ್ದೇನೆ. ಸತ್ಯ ಹೊರ ಬರಬೇಕು ಎಂದೇ ನಾವು ಎಸ್ಐಟಿ ರಚನೆ ಮಾಡಿದ್ದೇವೆ. ಈ ಮಧ್ಯೆ ಅನೇಕ ಹೇಳಿಕೆಗಳನ್ನು ಗಮನಿಸಿದ್ದೇನೆ. ಹೇಳಿಕೆಗಳಿಂದ ಸತ್ಯ ಹೊರ ಬರಲ್ಲ. ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಯಲು ಅವಕಾಶ ಮಾಡಿಕೊಡಬೇಕು. ಅವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬೇಡಿ. ಸತ್ಯ ಹೊರ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ. ಈಗಾಗಲೇ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮಾಡಿದ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ. ಎನ್ಐಎ ತನಿಖೆ ಅವಶ್ಯಕತೆ ಬಗ್ಗೆ ಸದ್ಯ ತನಿಖೆ ಮಾಡುವವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.

ಇನ್ನು ಜೆಡಿಎಸ್‌ನಿಂದ ಧರ್ಮಸ್ಥಳ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೆಡಿಎಸ್‌ನವರು ಕೂಡ ಮಂಜುನಾಥನ ದರ್ಶನ ಪಡೆಯಲಿ. ನಾವು ಯಾರನ್ನು ತಡೆಯಲ್ಲ. ಇದರಲ್ಲಿ ರಾಜಕಾರಣ ಬೇಡ ಎಂದು ಹೇಳಿದ್ದೇವೆ. ಮಂಜುನಾಥನ ದರ್ಶನ ಯಾರು ಬೇಕಾದ್ರೂ ಪಡೆಯಬಹುದು. ಈ ಪ್ರಕರಣದಲ್ಲಿ ತನಿಖೆಗೆ ಕಾಲ ನಿಗದಿ ಮಾಡೋದಕ್ಕೆ ಆಗಲ್ಲ. ಆದ್ರೆ ಅದಷ್ಟು ಬೇಗ ತನಿಖೆ ಮಾಡಿ ಎಂದು ಹೇಳಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

4 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

4 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

4 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

4 hours ago