ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಹೊರ ಬರಲೆಂದೇ ನಾವು ಎಸ್ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಉತ್ತರ ಕೊಟ್ಟಿದ್ದೇನೆ. ಸತ್ಯ ಹೊರ ಬರಬೇಕು ಎಂದೇ ನಾವು ಎಸ್ಐಟಿ ರಚನೆ ಮಾಡಿದ್ದೇವೆ. ಈ ಮಧ್ಯೆ ಅನೇಕ ಹೇಳಿಕೆಗಳನ್ನು ಗಮನಿಸಿದ್ದೇನೆ. ಹೇಳಿಕೆಗಳಿಂದ ಸತ್ಯ ಹೊರ ಬರಲ್ಲ. ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಯಲು ಅವಕಾಶ ಮಾಡಿಕೊಡಬೇಕು. ಅವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬೇಡಿ. ಸತ್ಯ ಹೊರ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ. ಈಗಾಗಲೇ ಮಾಸ್ಕ್ಮ್ಯಾನ್ ಚಿನ್ನಯ್ಯನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮಾಡಿದ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ. ಎನ್ಐಎ ತನಿಖೆ ಅವಶ್ಯಕತೆ ಬಗ್ಗೆ ಸದ್ಯ ತನಿಖೆ ಮಾಡುವವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.
ಇನ್ನು ಜೆಡಿಎಸ್ನಿಂದ ಧರ್ಮಸ್ಥಳ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೆಡಿಎಸ್ನವರು ಕೂಡ ಮಂಜುನಾಥನ ದರ್ಶನ ಪಡೆಯಲಿ. ನಾವು ಯಾರನ್ನು ತಡೆಯಲ್ಲ. ಇದರಲ್ಲಿ ರಾಜಕಾರಣ ಬೇಡ ಎಂದು ಹೇಳಿದ್ದೇವೆ. ಮಂಜುನಾಥನ ದರ್ಶನ ಯಾರು ಬೇಕಾದ್ರೂ ಪಡೆಯಬಹುದು. ಈ ಪ್ರಕರಣದಲ್ಲಿ ತನಿಖೆಗೆ ಕಾಲ ನಿಗದಿ ಮಾಡೋದಕ್ಕೆ ಆಗಲ್ಲ. ಆದ್ರೆ ಅದಷ್ಟು ಬೇಗ ತನಿಖೆ ಮಾಡಿ ಎಂದು ಹೇಳಿದ್ದೇವೆ ಎಂದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…