ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಹೊರ ಬರಲೆಂದೇ ನಾವು ಎಸ್ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಉತ್ತರ ಕೊಟ್ಟಿದ್ದೇನೆ. ಸತ್ಯ ಹೊರ ಬರಬೇಕು ಎಂದೇ ನಾವು ಎಸ್ಐಟಿ ರಚನೆ ಮಾಡಿದ್ದೇವೆ. ಈ ಮಧ್ಯೆ ಅನೇಕ ಹೇಳಿಕೆಗಳನ್ನು ಗಮನಿಸಿದ್ದೇನೆ. ಹೇಳಿಕೆಗಳಿಂದ ಸತ್ಯ ಹೊರ ಬರಲ್ಲ. ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಯಲು ಅವಕಾಶ ಮಾಡಿಕೊಡಬೇಕು. ಅವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬೇಡಿ. ಸತ್ಯ ಹೊರ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ. ಈಗಾಗಲೇ ಮಾಸ್ಕ್ಮ್ಯಾನ್ ಚಿನ್ನಯ್ಯನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮಾಡಿದ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ. ಎನ್ಐಎ ತನಿಖೆ ಅವಶ್ಯಕತೆ ಬಗ್ಗೆ ಸದ್ಯ ತನಿಖೆ ಮಾಡುವವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.
ಇನ್ನು ಜೆಡಿಎಸ್ನಿಂದ ಧರ್ಮಸ್ಥಳ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೆಡಿಎಸ್ನವರು ಕೂಡ ಮಂಜುನಾಥನ ದರ್ಶನ ಪಡೆಯಲಿ. ನಾವು ಯಾರನ್ನು ತಡೆಯಲ್ಲ. ಇದರಲ್ಲಿ ರಾಜಕಾರಣ ಬೇಡ ಎಂದು ಹೇಳಿದ್ದೇವೆ. ಮಂಜುನಾಥನ ದರ್ಶನ ಯಾರು ಬೇಕಾದ್ರೂ ಪಡೆಯಬಹುದು. ಈ ಪ್ರಕರಣದಲ್ಲಿ ತನಿಖೆಗೆ ಕಾಲ ನಿಗದಿ ಮಾಡೋದಕ್ಕೆ ಆಗಲ್ಲ. ಆದ್ರೆ ಅದಷ್ಟು ಬೇಗ ತನಿಖೆ ಮಾಡಿ ಎಂದು ಹೇಳಿದ್ದೇವೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…