ಮೈಸೂರು ನಗರ

ಧರ್ಮಸ್ಥಳ ಪ್ರಕರಣ: ಸತ್ಯ ಹೊರ ಬರಲೆಂದೇ ಎಸ್‌ಐಟಿ ರಚನೆ ಎಂದ ಹೋಂ ಮಿನಿಸ್ಟರ್‌

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಹೊರ ಬರಲೆಂದೇ ನಾವು ಎಸ್‌ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಉತ್ತರ ಕೊಟ್ಟಿದ್ದೇನೆ. ಸತ್ಯ ಹೊರ ಬರಬೇಕು ಎಂದೇ ನಾವು ಎಸ್ಐಟಿ ರಚನೆ ಮಾಡಿದ್ದೇವೆ. ಈ ಮಧ್ಯೆ ಅನೇಕ ಹೇಳಿಕೆಗಳನ್ನು ಗಮನಿಸಿದ್ದೇನೆ. ಹೇಳಿಕೆಗಳಿಂದ ಸತ್ಯ ಹೊರ ಬರಲ್ಲ. ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಯಲು ಅವಕಾಶ ಮಾಡಿಕೊಡಬೇಕು. ಅವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬೇಡಿ. ಸತ್ಯ ಹೊರ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ. ಈಗಾಗಲೇ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮಾಡಿದ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ. ಎನ್ಐಎ ತನಿಖೆ ಅವಶ್ಯಕತೆ ಬಗ್ಗೆ ಸದ್ಯ ತನಿಖೆ ಮಾಡುವವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.

ಇನ್ನು ಜೆಡಿಎಸ್‌ನಿಂದ ಧರ್ಮಸ್ಥಳ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೆಡಿಎಸ್‌ನವರು ಕೂಡ ಮಂಜುನಾಥನ ದರ್ಶನ ಪಡೆಯಲಿ. ನಾವು ಯಾರನ್ನು ತಡೆಯಲ್ಲ. ಇದರಲ್ಲಿ ರಾಜಕಾರಣ ಬೇಡ ಎಂದು ಹೇಳಿದ್ದೇವೆ. ಮಂಜುನಾಥನ ದರ್ಶನ ಯಾರು ಬೇಕಾದ್ರೂ ಪಡೆಯಬಹುದು. ಈ ಪ್ರಕರಣದಲ್ಲಿ ತನಿಖೆಗೆ ಕಾಲ ನಿಗದಿ ಮಾಡೋದಕ್ಕೆ ಆಗಲ್ಲ. ಆದ್ರೆ ಅದಷ್ಟು ಬೇಗ ತನಿಖೆ ಮಾಡಿ ಎಂದು ಹೇಳಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

2 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

4 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

4 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

5 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

10 hours ago