ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಕಾಂಗ್ರೆಸ್ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿ ಇರಬೇಕು. ನಾವು ಸರಿಯಾಗಿದ್ದರೆ ಯಾರು ಯಾಕೆ ನಮ್ಮನು ಟ್ರ್ಯಾಪ್ ಮಾಡುತ್ತಾರೆ. ನಮ್ಮ ದೃಷ್ಟಿ ಸರಿ ಇದ್ದಾಗ ಯಾವ ತಪ್ಪು ನಡೆಯಲ್ಲ. ಸಾವಿರ ಜನ ಬಂದು ನಮ್ಮನ್ನು ಮಾತಾಡಿಸಲಿ ನಮ್ಮ ನೋಟ ಸರಿ ಇದ್ದರೆ ಏನೂ ಆಗಲ್ಲ ಎಂದು ಕಾಂಗ್ರೆಸ್ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟರು.
ಇನ್ನು ಹನಿಟ್ರ್ಯಾಪ್ ವಿಚಾರ ಸದನದಲ್ಲಿ ಚರ್ಚೆ ಅಗಬಾರದಿತ್ತು. ಯಾರಿಗೆ ಸಮಸ್ಯೆ ಆಗಿದೆಯೋ ಅವರು ಹೋಗಿ ದೂರು ಕೊಟ್ಟು ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು. ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ಮಾಡಿ ಯುವ ಶಾಸಕರಿಗೆ ಯಾವ ಸಂದೇಶ ಕೊಟ್ಟರು? ಇದರ ಅಗತ್ಯ ಏನಿತ್ತು? ಎಂದು ಬೇಸರ ವ್ಯಕ್ತಪಡಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…