ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಕಾಂಗ್ರೆಸ್ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿ ಇರಬೇಕು. ನಾವು ಸರಿಯಾಗಿದ್ದರೆ ಯಾರು ಯಾಕೆ ನಮ್ಮನು ಟ್ರ್ಯಾಪ್ ಮಾಡುತ್ತಾರೆ. ನಮ್ಮ ದೃಷ್ಟಿ ಸರಿ ಇದ್ದಾಗ ಯಾವ ತಪ್ಪು ನಡೆಯಲ್ಲ. ಸಾವಿರ ಜನ ಬಂದು ನಮ್ಮನ್ನು ಮಾತಾಡಿಸಲಿ ನಮ್ಮ ನೋಟ ಸರಿ ಇದ್ದರೆ ಏನೂ ಆಗಲ್ಲ ಎಂದು ಕಾಂಗ್ರೆಸ್ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟರು.
ಇನ್ನು ಹನಿಟ್ರ್ಯಾಪ್ ವಿಚಾರ ಸದನದಲ್ಲಿ ಚರ್ಚೆ ಅಗಬಾರದಿತ್ತು. ಯಾರಿಗೆ ಸಮಸ್ಯೆ ಆಗಿದೆಯೋ ಅವರು ಹೋಗಿ ದೂರು ಕೊಟ್ಟು ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು. ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ಮಾಡಿ ಯುವ ಶಾಸಕರಿಗೆ ಯಾವ ಸಂದೇಶ ಕೊಟ್ಟರು? ಇದರ ಅಗತ್ಯ ಏನಿತ್ತು? ಎಂದು ಬೇಸರ ವ್ಯಕ್ತಪಡಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…