Mysore
16
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಸದನದಲ್ಲಿ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪ: ಶಾಸಕ ತನ್ವೀರ್‌ ಸೇಠ್‌ ತೀವ್ರ ಬೇಸರ

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು ಹೋಗೋದು ಬಿಡೋದು ಅವರ ಇಚ್ಛೆಗೆ ಬಿಟ್ಟದ್ದು. ಇದು ಸದನದಲ್ಲಿ ಯಾಕೆ ಚರ್ಚೆಗೆ ಬಂತು ಅಂತ ಹೇಳಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ. ತನಿಖೆ ಆಗಬೇಕು, ಆಗಬಾರದು ಅಂತ ಹೇಳಲಿಕ್ಕೂ ಹೋಗಲ್ಲ. ಯಾವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಇರಬೇಕು ಆ ಉದ್ದೇಶದಿಂದ ಇರಬೇಕು. ಪ್ರಸಕ್ತ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಸರ್ಕಾರ ಒಂದೊಳ್ಳೆ ಆಡಳಿತ ಕೊಡಬೇಕು. ವೈಯಕ್ತಿಕ ವಿಚಾರಗಳನ್ನ ರಾಜಕೀಯದಲ್ಲಿ ತಂದಿದ್ದು ದುರಂತ. ವೈಯಕ್ತಿಕ ವಿಚಾರ, ಜಾತಿ ವಿಚಾರ, ಪ್ರಾಂತ್ಯ ವಿಚಾರಗಳನ್ನು ರಾಜಕೀಯಕ್ಕೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಸತೀಶ್‌ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನಾದರೂ ಭೇಟಿ ಆಗಬಹುದು. ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಅನಿವಾರ್ಯತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ತಲೆಕೆಡೆಸಿಕೊಳ್ಳಲ್ಲ. 140 ಸಂಖ್ಯಾಬಲದ ಮುಂದೆ 19 ಜನರು ಏನೂ ಮಾಡಲಿಕ್ಕೆ ಆಗಲ್ಲ ಎಂದರು.

 

 

Tags:
error: Content is protected !!