ಮೈಸೂರು ನಗರ

ಸದನದಲ್ಲಿ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪ: ಶಾಸಕ ತನ್ವೀರ್‌ ಸೇಠ್‌ ತೀವ್ರ ಬೇಸರ

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು ಹೋಗೋದು ಬಿಡೋದು ಅವರ ಇಚ್ಛೆಗೆ ಬಿಟ್ಟದ್ದು. ಇದು ಸದನದಲ್ಲಿ ಯಾಕೆ ಚರ್ಚೆಗೆ ಬಂತು ಅಂತ ಹೇಳಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ. ತನಿಖೆ ಆಗಬೇಕು, ಆಗಬಾರದು ಅಂತ ಹೇಳಲಿಕ್ಕೂ ಹೋಗಲ್ಲ. ಯಾವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಇರಬೇಕು ಆ ಉದ್ದೇಶದಿಂದ ಇರಬೇಕು. ಪ್ರಸಕ್ತ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಸರ್ಕಾರ ಒಂದೊಳ್ಳೆ ಆಡಳಿತ ಕೊಡಬೇಕು. ವೈಯಕ್ತಿಕ ವಿಚಾರಗಳನ್ನ ರಾಜಕೀಯದಲ್ಲಿ ತಂದಿದ್ದು ದುರಂತ. ವೈಯಕ್ತಿಕ ವಿಚಾರ, ಜಾತಿ ವಿಚಾರ, ಪ್ರಾಂತ್ಯ ವಿಚಾರಗಳನ್ನು ರಾಜಕೀಯಕ್ಕೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಸತೀಶ್‌ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನಾದರೂ ಭೇಟಿ ಆಗಬಹುದು. ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಅನಿವಾರ್ಯತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ತಲೆಕೆಡೆಸಿಕೊಳ್ಳಲ್ಲ. 140 ಸಂಖ್ಯಾಬಲದ ಮುಂದೆ 19 ಜನರು ಏನೂ ಮಾಡಲಿಕ್ಕೆ ಆಗಲ್ಲ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

7 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

7 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

8 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

11 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

11 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

12 hours ago