ಮೈಸೂರು ನಗರ

ಸದನದಲ್ಲಿ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪ: ಶಾಸಕ ತನ್ವೀರ್‌ ಸೇಠ್‌ ತೀವ್ರ ಬೇಸರ

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು ಹೋಗೋದು ಬಿಡೋದು ಅವರ ಇಚ್ಛೆಗೆ ಬಿಟ್ಟದ್ದು. ಇದು ಸದನದಲ್ಲಿ ಯಾಕೆ ಚರ್ಚೆಗೆ ಬಂತು ಅಂತ ಹೇಳಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ. ತನಿಖೆ ಆಗಬೇಕು, ಆಗಬಾರದು ಅಂತ ಹೇಳಲಿಕ್ಕೂ ಹೋಗಲ್ಲ. ಯಾವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಇರಬೇಕು ಆ ಉದ್ದೇಶದಿಂದ ಇರಬೇಕು. ಪ್ರಸಕ್ತ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಸರ್ಕಾರ ಒಂದೊಳ್ಳೆ ಆಡಳಿತ ಕೊಡಬೇಕು. ವೈಯಕ್ತಿಕ ವಿಚಾರಗಳನ್ನ ರಾಜಕೀಯದಲ್ಲಿ ತಂದಿದ್ದು ದುರಂತ. ವೈಯಕ್ತಿಕ ವಿಚಾರ, ಜಾತಿ ವಿಚಾರ, ಪ್ರಾಂತ್ಯ ವಿಚಾರಗಳನ್ನು ರಾಜಕೀಯಕ್ಕೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಸತೀಶ್‌ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನಾದರೂ ಭೇಟಿ ಆಗಬಹುದು. ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಅನಿವಾರ್ಯತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ತಲೆಕೆಡೆಸಿಕೊಳ್ಳಲ್ಲ. 140 ಸಂಖ್ಯಾಬಲದ ಮುಂದೆ 19 ಜನರು ಏನೂ ಮಾಡಲಿಕ್ಕೆ ಆಗಲ್ಲ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

13 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

13 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

13 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

13 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

16 hours ago