ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್ ವಿಚಾರ ಕುರಿತು ಶಾಸಕ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವನ್ನು ಮುಂದುವರಿಸಿಕೊಂಡು ಹೋಗೋದು ಬಿಡೋದು ಅವರ ಇಚ್ಛೆಗೆ ಬಿಟ್ಟದ್ದು. ಇದು ಸದನದಲ್ಲಿ ಯಾಕೆ ಚರ್ಚೆಗೆ ಬಂತು ಅಂತ ಹೇಳಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ. ತನಿಖೆ ಆಗಬೇಕು, ಆಗಬಾರದು ಅಂತ ಹೇಳಲಿಕ್ಕೂ ಹೋಗಲ್ಲ. ಯಾವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಇರಬೇಕು ಆ ಉದ್ದೇಶದಿಂದ ಇರಬೇಕು. ಪ್ರಸಕ್ತ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಸರ್ಕಾರ ಒಂದೊಳ್ಳೆ ಆಡಳಿತ ಕೊಡಬೇಕು. ವೈಯಕ್ತಿಕ ವಿಚಾರಗಳನ್ನ ರಾಜಕೀಯದಲ್ಲಿ ತಂದಿದ್ದು ದುರಂತ. ವೈಯಕ್ತಿಕ ವಿಚಾರ, ಜಾತಿ ವಿಚಾರ, ಪ್ರಾಂತ್ಯ ವಿಚಾರಗಳನ್ನು ರಾಜಕೀಯಕ್ಕೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಸತೀಶ್ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನಾದರೂ ಭೇಟಿ ಆಗಬಹುದು. ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಅನಿವಾರ್ಯತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ತಲೆಕೆಡೆಸಿಕೊಳ್ಳಲ್ಲ. 140 ಸಂಖ್ಯಾಬಲದ ಮುಂದೆ 19 ಜನರು ಏನೂ ಮಾಡಲಿಕ್ಕೆ ಆಗಲ್ಲ ಎಂದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…