ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ವಿಚಾರ ಕುರಿತು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಸುನಿಲ್ ಕುಮಾರ್, ರಾಜಣ್ಣ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎಂದು ವ್ಯಂಗ್ಯವಾಡಿದರು. ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆ ಮಾಡಿದರೆ ಮಾತ್ರ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಆಗ್ರಹಿಸಿದರು.
ಇನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ಬಿಜೆಪಿಯ ಆಂತರಿಕ ವಿಚಾರವಾಗಿದ್ದು, ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಈ ಹಿಂದೆ ಅವರ ಬಗ್ಗೆ ಮಾತನಾಡಿದ್ದೆ. ಆಗ ಅವರೇ ಫೋನ್ ಮಾಡಿ ಮಾತನಾಡಿ ಸರಿ ಮಾಡಿಕೊಂಡರು. ಈಗ ನಮ್ಮ ಮಧ್ಯೆ ಏನೂ ಇಲ್ಲ. ಮೇಲಾಗಿ ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಮುಂದೆಯೂ ಏನೇನೂ ಬೆಳವಣಿಗೆ ನಡೆಯುತ್ತೆ ಅದನ್ನು ಎಲ್ಲರೂ ಕಾದು ನೋಡೋಣ ಎಂದು ಅಚ್ಚರಿಯ ಹೇಳಿಕೆ ನೀಡಿದರು.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…