ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ವಿಚಾರ ಕುರಿತು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಸುನಿಲ್ ಕುಮಾರ್, ರಾಜಣ್ಣ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎಂದು ವ್ಯಂಗ್ಯವಾಡಿದರು. ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆ ಮಾಡಿದರೆ ಮಾತ್ರ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಆಗ್ರಹಿಸಿದರು.
ಇನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ಬಿಜೆಪಿಯ ಆಂತರಿಕ ವಿಚಾರವಾಗಿದ್ದು, ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಈ ಹಿಂದೆ ಅವರ ಬಗ್ಗೆ ಮಾತನಾಡಿದ್ದೆ. ಆಗ ಅವರೇ ಫೋನ್ ಮಾಡಿ ಮಾತನಾಡಿ ಸರಿ ಮಾಡಿಕೊಂಡರು. ಈಗ ನಮ್ಮ ಮಧ್ಯೆ ಏನೂ ಇಲ್ಲ. ಮೇಲಾಗಿ ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಮುಂದೆಯೂ ಏನೇನೂ ಬೆಳವಣಿಗೆ ನಡೆಯುತ್ತೆ ಅದನ್ನು ಎಲ್ಲರೂ ಕಾದು ನೋಡೋಣ ಎಂದು ಅಚ್ಚರಿಯ ಹೇಳಿಕೆ ನೀಡಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…