ಮೈಸೂರು: ನಮ್ಮ ಪಕ್ಷದವರಿಂದಲೇ ಹನಿಟ್ರ್ಯಾಪ್ ಆಗಿದೆ ಎಂದು ನಾವು ಎಲ್ಲೂ ಕೂಡ ಹೇಳಿಲ್ಲ ಎಂದು ಎಂಎಲ್ಸಿ ಸಿ ರಾಜೇಂದ್ರ ಬಿಜೆಪಿ ನಾಯಕರ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರು ರಾಜಣ್ಣ ಹೆಸರು ತೆಗೆದುಕೊಂಡು ಹನಿಟ್ರ್ಯಾಪ್ ವಿಚಾರ ಚರ್ಚೆ ಮಾಡಿದರು. ನಾವು ಕೂಡ ಸ್ಪಷ್ಟನೆ ನೀಡಬೇಕಿತ್ತು. ಹೀಗಾಗಿ ಆ ವಿಚಾರವನ್ನು ಚರ್ಚೆ ಮಾಡಿದ್ದೇವೆ. ನಮ್ಮ ಪಕ್ಷದವರಿಂದಲೇ ಹನಿಟ್ರ್ಯಾಪ್ ಆಗಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ. ಇದರ ಹಿಂದೆ ಯಾರಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು ಎಂದು ಕೇಳಿಕೊಂಡಿದ್ದೇವೆ. ಈಗಾಗಲೇ ಸಿಐಡಿಯಿಂದ ತನಿಖೆ ಆಗುತ್ತಿದೆ. ನಮ್ಮ ತಂದೆಯವರು ದೆಹಲಿಗೆ ತೆರಳಿದ್ದಾರೆ. ಮೊನ್ನೆ ಸಿಐಡಿ ಅಧಿಕಾರಿಗಳನ್ನು ಭೇಟಿ ಮಾಡಲು ಹೋಗಿದ್ದರು. ಹಬ್ಬದ ಕಾರಣ ಅವರನ್ನು ಭೇಟಿಯಾಗಿರಲಿಲ್ಲ. ಈಗ ದೆಹಲಿಯಿಂದ ಬಂದ ತಕ್ಷಣ ಸಿಐಡಿ ಅಧಿಕಾರಿಗಳನ್ನು ಭೇಟಿ ಮಾಡಿ ಹೇಳಿಕೆ ಕೊಡುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…