ಮೈಸೂರು: ನಮ್ಮ ಪಕ್ಷದವರಿಂದಲೇ ಹನಿಟ್ರ್ಯಾಪ್ ಆಗಿದೆ ಎಂದು ನಾವು ಎಲ್ಲೂ ಕೂಡ ಹೇಳಿಲ್ಲ ಎಂದು ಎಂಎಲ್ಸಿ ಸಿ ರಾಜೇಂದ್ರ ಬಿಜೆಪಿ ನಾಯಕರ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರು ರಾಜಣ್ಣ ಹೆಸರು ತೆಗೆದುಕೊಂಡು ಹನಿಟ್ರ್ಯಾಪ್ ವಿಚಾರ ಚರ್ಚೆ ಮಾಡಿದರು. ನಾವು ಕೂಡ ಸ್ಪಷ್ಟನೆ ನೀಡಬೇಕಿತ್ತು. ಹೀಗಾಗಿ ಆ ವಿಚಾರವನ್ನು ಚರ್ಚೆ ಮಾಡಿದ್ದೇವೆ. ನಮ್ಮ ಪಕ್ಷದವರಿಂದಲೇ ಹನಿಟ್ರ್ಯಾಪ್ ಆಗಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ. ಇದರ ಹಿಂದೆ ಯಾರಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು ಎಂದು ಕೇಳಿಕೊಂಡಿದ್ದೇವೆ. ಈಗಾಗಲೇ ಸಿಐಡಿಯಿಂದ ತನಿಖೆ ಆಗುತ್ತಿದೆ. ನಮ್ಮ ತಂದೆಯವರು ದೆಹಲಿಗೆ ತೆರಳಿದ್ದಾರೆ. ಮೊನ್ನೆ ಸಿಐಡಿ ಅಧಿಕಾರಿಗಳನ್ನು ಭೇಟಿ ಮಾಡಲು ಹೋಗಿದ್ದರು. ಹಬ್ಬದ ಕಾರಣ ಅವರನ್ನು ಭೇಟಿಯಾಗಿರಲಿಲ್ಲ. ಈಗ ದೆಹಲಿಯಿಂದ ಬಂದ ತಕ್ಷಣ ಸಿಐಡಿ ಅಧಿಕಾರಿಗಳನ್ನು ಭೇಟಿ ಮಾಡಿ ಹೇಳಿಕೆ ಕೊಡುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…