ಮೈಸೂರು : ಮಹಾರಾಷ್ಟ್ರದ ಕಾರ್ಜತ್ನಲ್ಲಿ ಇತ್ತೀಚೆಗೆ ನಡೆದ ಹೂಫ್ಬೀಟ್ ಮ್ಯಾರಥಾನ್ – ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್ಶಿಪ್ನಲ್ಲಿ ಮೈಸೂರಿನ ಚಾಮುಂಡಿ ಹಾರ್ಸಸ್ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳ ನಡುವೆ ಮೈಸೂರಿನ ಯುವ ರೈಡರ್ಗಳು ತಮ್ಮ ಸಾಮರ್ಥ್ಯ, ಸಹನಶಕ್ತಿ ಹಾಗೂ ಕುದುರೆಯೊಂದಿಗೆ ಹೊಂದಾಣಿಕೆಯ ಕೌಶಲವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ಈ ಚಾಂಪಿಯನ್ಶಿಪ್ನಲ್ಲಿ 20 ಕಿ.ಮೀ. ಮತ್ತು 40 ಕಿ.ಮೀ ಎಂಡ್ಯುರನ್ಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುದುರೆಯ ಆರೋಗ್ಯ ಪರೀಕ್ಷೆ, ವೇಗ ನಿಯಂತ್ರಣ, ಸಮಯ ನಿರ್ವಹಣೆ ಹಾಗೂ ರೈಡರ್ಗಳ ದೈಹಿಕ-ಮಾನಸಿಕ ಸಮತೋಲನವನ್ನು ಪರಿಶೀಲಿಸುವ ಕಠಿಣ ಸ್ಪರ್ಧೆಯಾಗಿದ್ದರೂ, ಚಾಮುಂಡಿ ಹಾರ್ಸಸ್ ಸಂಸ್ಥೆಯ ಶಿಸ್ತಿನ ತರಬೇತಿಯನ್ನು ಅವರು ಸದುಪಯೋಗಪಡಿಸಿಕೊಂಡರು.
ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆ, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಸೇಂಟ್ ಸೆಂಟ್ರಲ್ ಜೋಸೆಫ್ ಶಾಲೆಗಳ ವಿದ್ಯಾರ್ಥಿಗಳಾದ ಕ್ರಮವಾಗಿ ಎಲ್.ಕ್ಷಮಿನಾಮ್ ಅರಸ್, ಎಸ್.ಕೆ.ಲೌಕ್ಯ ಮತ್ತು ಎಸ್.ಕೆ.ಅದ್ವಿಕಾ ಈ ಸಾಧನೆ ಮಾಡಿದವರು.
ಚಾಮುಂಡಿ ಹಾರ್ಸಸ್ ಸಂಸ್ಥೆಯ ವ್ಯವಸ್ಥಿತ ತರಬೇತಿ, ಪಾಲಕರ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ನಿರಂತರ ಶ್ರಮದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲೂ ಮೈಸೂರಿನ ಈ ಯುವ ಪ್ರತಿಭೆಗಳು ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಸಫಾರಿ ಪುನಾರಂಭವಾಗಿರುವುದರಿಂದ ವನ್ಯಜೀವಿಗಳಿಗೆ ತೊಂದರೆ ಆಗಿಲ್ಲ. ನಮ್ಮ ಹೊಟ್ಟೆ ಹೊರೆಯಲು ಸಹಾಯವಾಗಿದೆ... ಕಾಡ್ಗಿಚ್ಚು ನಂದಿಸುವ ಸಂದರ್ಭಗಳಲ್ಲಿ…
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…