ಮೈಸೂರು : ಮಹಾರಾಷ್ಟ್ರದ ಕಾರ್ಜತ್ನಲ್ಲಿ ಇತ್ತೀಚೆಗೆ ನಡೆದ ಹೂಫ್ಬೀಟ್ ಮ್ಯಾರಥಾನ್ – ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್ಶಿಪ್ನಲ್ಲಿ ಮೈಸೂರಿನ ಚಾಮುಂಡಿ ಹಾರ್ಸಸ್ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳ ನಡುವೆ ಮೈಸೂರಿನ ಯುವ ರೈಡರ್ಗಳು ತಮ್ಮ ಸಾಮರ್ಥ್ಯ, ಸಹನಶಕ್ತಿ ಹಾಗೂ ಕುದುರೆಯೊಂದಿಗೆ ಹೊಂದಾಣಿಕೆಯ ಕೌಶಲವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ಈ ಚಾಂಪಿಯನ್ಶಿಪ್ನಲ್ಲಿ 20 ಕಿ.ಮೀ. ಮತ್ತು 40 ಕಿ.ಮೀ ಎಂಡ್ಯುರನ್ಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುದುರೆಯ ಆರೋಗ್ಯ ಪರೀಕ್ಷೆ, ವೇಗ ನಿಯಂತ್ರಣ, ಸಮಯ ನಿರ್ವಹಣೆ ಹಾಗೂ ರೈಡರ್ಗಳ ದೈಹಿಕ-ಮಾನಸಿಕ ಸಮತೋಲನವನ್ನು ಪರಿಶೀಲಿಸುವ ಕಠಿಣ ಸ್ಪರ್ಧೆಯಾಗಿದ್ದರೂ, ಚಾಮುಂಡಿ ಹಾರ್ಸಸ್ ಸಂಸ್ಥೆಯ ಶಿಸ್ತಿನ ತರಬೇತಿಯನ್ನು ಅವರು ಸದುಪಯೋಗಪಡಿಸಿಕೊಂಡರು.
ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆ, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಸೇಂಟ್ ಸೆಂಟ್ರಲ್ ಜೋಸೆಫ್ ಶಾಲೆಗಳ ವಿದ್ಯಾರ್ಥಿಗಳಾದ ಕ್ರಮವಾಗಿ ಎಲ್.ಕ್ಷಮಿನಾಮ್ ಅರಸ್, ಎಸ್.ಕೆ.ಲೌಕ್ಯ ಮತ್ತು ಎಸ್.ಕೆ.ಅದ್ವಿಕಾ ಈ ಸಾಧನೆ ಮಾಡಿದವರು.
ಚಾಮುಂಡಿ ಹಾರ್ಸಸ್ ಸಂಸ್ಥೆಯ ವ್ಯವಸ್ಥಿತ ತರಬೇತಿ, ಪಾಲಕರ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ನಿರಂತರ ಶ್ರಮದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲೂ ಮೈಸೂರಿನ ಈ ಯುವ ಪ್ರತಿಭೆಗಳು ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…