ಮೈಸೂರು ನಗರ

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು ಮನೋರಂಜನೆ, ಮೆರವಣಿಗೆಗೆ ಬಳಸದಂತೆ ನಿರ್ಬಂಧ ಹೇರಲಾಗಿದೆ.

ಮೈಸೂರು ರೇಸ್‌ಕ್ಲಬ್‌ನಲ್ಲಿರುವ ಕುದುರೆಗಳ ಪೈಕಿ ಒಂದು ಕುದುರೆಗೆ ಗ್ಲಾಂಡರ್ಸ್ ರೋಗ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಶುಸಂಗೋಪನಾ ಇಲಾಖೆ ಸರ್ಕಾರದ ಅಧಿನ ಕಾರ್ಯದರ್ಶಿಗಳು ಡಿ.೧೯ರಂದು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ ೨೦೦೯ರ ಕಲಂ-೬ರಡಿ ಅಧಿಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ:-ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಇದರ ಅಧಿಸೂಚನೆಯಂತೆ ಮೈಸೂರು ರೇಸ್‌ಕ್ಲಬ್ ಗ್ಲಾಂಡರ್ಸ್ ಕೇಂದ್ರೀಕೃತಸ್ಥಳ ಗುರುತಿಸಿರುವುದರಿಂದ ಕೇಂದ್ರದಿಂದ ೨ ಕಿ.ಮೀ ವ್ಯಾಪ್ತಿಯನ್ನು ಚಲನವಲನ ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಮೈಸೂರು ರೇಸ್ ಕ್ಲಬ್‌ನ ಸುತ್ತಲಿನ ೨ ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ,ಕತ್ತೆ, ಹೇಸರಗತ್ತೆ, ಪ್ರಾಣಿಗಳ ಚಲನವಲನ,ಕುದುರೆ,ಕತ್ತೆ,ಹೇಸರಗತ್ತೆಗಳನ್ನು ಮನೋರಂಜನೆ, ಮೆರವಣಿಗೆ, ಶುಭಕಾರ್ಯಗಳಲ್ಲಿ ಉಪಯೋಗಿಸದಂತೆ ಸಂಪೂರ್ಣವಾಗಿ ನಿರ್ಬಂಧೀಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.

ಮೈಸೂರು ರೇಸ್ ಕೋರ್ಸ್‌ನಲ್ಲಿ ಒಂದು ಕುದುರೆ ಸಾವನ್ನಪ್ಪಿರುವ ಕುರಿತಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಎನ್.ನಾಗರಾಜು ವರದಿ ನೀಡಿದ್ದರು. ಹಾಗಾಗಿ,ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಿದ್ದಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

6 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

7 hours ago