ಮೈಸೂರು ನಗರ

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು ಮನೋರಂಜನೆ, ಮೆರವಣಿಗೆಗೆ ಬಳಸದಂತೆ ನಿರ್ಬಂಧ ಹೇರಲಾಗಿದೆ.

ಮೈಸೂರು ರೇಸ್‌ಕ್ಲಬ್‌ನಲ್ಲಿರುವ ಕುದುರೆಗಳ ಪೈಕಿ ಒಂದು ಕುದುರೆಗೆ ಗ್ಲಾಂಡರ್ಸ್ ರೋಗ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಶುಸಂಗೋಪನಾ ಇಲಾಖೆ ಸರ್ಕಾರದ ಅಧಿನ ಕಾರ್ಯದರ್ಶಿಗಳು ಡಿ.೧೯ರಂದು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ ೨೦೦೯ರ ಕಲಂ-೬ರಡಿ ಅಧಿಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ:-ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಇದರ ಅಧಿಸೂಚನೆಯಂತೆ ಮೈಸೂರು ರೇಸ್‌ಕ್ಲಬ್ ಗ್ಲಾಂಡರ್ಸ್ ಕೇಂದ್ರೀಕೃತಸ್ಥಳ ಗುರುತಿಸಿರುವುದರಿಂದ ಕೇಂದ್ರದಿಂದ ೨ ಕಿ.ಮೀ ವ್ಯಾಪ್ತಿಯನ್ನು ಚಲನವಲನ ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಮೈಸೂರು ರೇಸ್ ಕ್ಲಬ್‌ನ ಸುತ್ತಲಿನ ೨ ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ,ಕತ್ತೆ, ಹೇಸರಗತ್ತೆ, ಪ್ರಾಣಿಗಳ ಚಲನವಲನ,ಕುದುರೆ,ಕತ್ತೆ,ಹೇಸರಗತ್ತೆಗಳನ್ನು ಮನೋರಂಜನೆ, ಮೆರವಣಿಗೆ, ಶುಭಕಾರ್ಯಗಳಲ್ಲಿ ಉಪಯೋಗಿಸದಂತೆ ಸಂಪೂರ್ಣವಾಗಿ ನಿರ್ಬಂಧೀಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.

ಮೈಸೂರು ರೇಸ್ ಕೋರ್ಸ್‌ನಲ್ಲಿ ಒಂದು ಕುದುರೆ ಸಾವನ್ನಪ್ಪಿರುವ ಕುರಿತಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಎನ್.ನಾಗರಾಜು ವರದಿ ನೀಡಿದ್ದರು. ಹಾಗಾಗಿ,ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಿದ್ದಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

4 hours ago