ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು ಮನೋರಂಜನೆ, ಮೆರವಣಿಗೆಗೆ ಬಳಸದಂತೆ ನಿರ್ಬಂಧ ಹೇರಲಾಗಿದೆ.
ಮೈಸೂರು ರೇಸ್ಕ್ಲಬ್ನಲ್ಲಿರುವ ಕುದುರೆಗಳ ಪೈಕಿ ಒಂದು ಕುದುರೆಗೆ ಗ್ಲಾಂಡರ್ಸ್ ರೋಗ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಶುಸಂಗೋಪನಾ ಇಲಾಖೆ ಸರ್ಕಾರದ ಅಧಿನ ಕಾರ್ಯದರ್ಶಿಗಳು ಡಿ.೧೯ರಂದು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ ೨೦೦೯ರ ಕಲಂ-೬ರಡಿ ಅಧಿಸೂಚನೆ ಹೊರಡಿಸಿದ್ದಾರೆ.
ಇದನ್ನೂ ಓದಿ:-ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ
ಇದರ ಅಧಿಸೂಚನೆಯಂತೆ ಮೈಸೂರು ರೇಸ್ಕ್ಲಬ್ ಗ್ಲಾಂಡರ್ಸ್ ಕೇಂದ್ರೀಕೃತಸ್ಥಳ ಗುರುತಿಸಿರುವುದರಿಂದ ಕೇಂದ್ರದಿಂದ ೨ ಕಿ.ಮೀ ವ್ಯಾಪ್ತಿಯನ್ನು ಚಲನವಲನ ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಮೈಸೂರು ರೇಸ್ ಕ್ಲಬ್ನ ಸುತ್ತಲಿನ ೨ ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ,ಕತ್ತೆ, ಹೇಸರಗತ್ತೆ, ಪ್ರಾಣಿಗಳ ಚಲನವಲನ,ಕುದುರೆ,ಕತ್ತೆ,ಹೇಸರಗತ್ತೆಗಳನ್ನು ಮನೋರಂಜನೆ, ಮೆರವಣಿಗೆ, ಶುಭಕಾರ್ಯಗಳಲ್ಲಿ ಉಪಯೋಗಿಸದಂತೆ ಸಂಪೂರ್ಣವಾಗಿ ನಿರ್ಬಂಧೀಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.
ಮೈಸೂರು ರೇಸ್ ಕೋರ್ಸ್ನಲ್ಲಿ ಒಂದು ಕುದುರೆ ಸಾವನ್ನಪ್ಪಿರುವ ಕುರಿತಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಎನ್.ನಾಗರಾಜು ವರದಿ ನೀಡಿದ್ದರು. ಹಾಗಾಗಿ,ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಿದ್ದಾರೆ ಎಂದು ತಿಳಿಸಿದ್ದಾರೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…