ಮೈಸೂರು: ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ, ಜೀವನೋಪಾಯ ಇಲಾಖೆ ವತಿಯಿಂದ ಇದೇ ಅಕ್ಟೋಬರ್.17ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ಸಚಿವ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ಮೈಸೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾವು ಉದ್ಯೋಗ ಮೇಳ ಮಾಡಿದ್ದೇವೆ. ಈ ಉದ್ಯೋಗ ಮೇಳದಲ್ಲಿ ಉದ್ಯೋಗಕಾಂಕ್ಷಿಗಳ ರಿಜಿಸ್ಟ್ರೇಷನ್ಗೆ ಅವಕಾಶ ಮಾಡಿಕೊಟ್ಟಿದ್ದೇವೆ. 24 ಸಾವಿರ ನೋಂದಣಿ ಮಾಡಿಕೊಂಡಿದ್ದಾರೆ. ಅತಿ ಹೆಚ್ಚು ಜನ ಮೈಸೂರಿನವರೇ ನೋಂದಣಿ ಮಾಡಿದ್ದಾರೆ. 15 ಸಾವಿರ ಉದ್ಯೋಗಕಾಂಕ್ಷಿಗಳ ಪ್ರೊಫೈಲಿಂಗ್ ಫಿಲ್ ಆಗಿದೆ. 221 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ.
ಪ್ರಸ್ತುತ 45 ಸಾವಿರ ಉದ್ಯೋಗಗಳು ಇಲ್ಲಿ ಖಾಲಿ ಇವೆ. ಅಕ್ಟೋಬರ್.17ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಉದ್ಯೋಗ ಮೇಳ ಇರುತ್ತದೆ. ಇತರೆ ಜಿಲ್ಲೆಯಿಂದ ಬರುವವರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಉದ್ಯೋಗ ಮೇಳ ಮಾಡುವುದರಿಂದ ಉದ್ಯೋಗಾಕಾಂಕ್ಷಿಗಳ ಮಾಹಿತಿ ತಿಳಿಯುತ್ತದೆ. ಯುವಕರ ಹಿತದೃಷ್ಟಿಯಿಂದ ಉದ್ಯೋಗ ಮೇಳ ಮಾಡುತ್ತಿದ್ದೇವೆ. 43,500 ಜನ ಯುವನಿಧಿ ಫಲಾನುಭವಿಗಳಿದ್ದಾರೆ. ಉದ್ಯೋಗ ಮೇಳದಿಂದ ಇದುವರೆಗೆ 13 ಸಾವಿರ ಜನರಿಗೆ ಉದ್ಯೋಗ ಸಿಕ್ಕಿದೆ. ಎಲ್ಲರೂ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿವಾರಿಸಲು ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಆದರೆ ರಾಜ್ಯ ಸರ್ಕಾರ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಉದ್ಯೋಗ ಮೇಳ ಆಯೋಜನೆ ಮೂಲಕ ನಿರುದ್ಯೋಗ ನಿವಾರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…