ಮೈಸೂರು: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು ಜನರು ಭಾಗಿಯಾಗಿದ್ದರು.
ಮಾನವ ಸರಪಳಿಯಲ್ಲಿ ಭಾಗಿಯಾಗಿದ್ದವರು ಸಾಲಿನಲ್ಲಿ ನಿಂತು ನಾಡಗೀತೆ, ಮುಖ್ಯ ಅತಿಥಿಗಳಿಂದ ಭಾಷಣ, ಸಂವಿಧಾನದ ಪ್ರಸ್ತಾವ ಓದುವುದು, ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವ ಕಾರ್ಯಕ್ರಮ ನಡೆಯಿತು.
ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಎಂಬ ಘೋಷಣೆ ಕೂಗಿ ಸರಪಳಿಯನ್ನು ಕಳಚುವ ಪ್ರಕ್ರಿಯೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ, ಎಸ್ಪಿ ಸೀಮಾ ಲಾಟ್ಕರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…