ಮೈಸೂರು ನಗರ

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ..!

ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಈ ನಡುವೆ ಯುವಕರಿಂದ ಹಲ್ಲೆಗೀಡಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಎಂಶ್ರೀ ನಗರದ ನಿವಾಸಿ ಮಹೇಶ್ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು ನಾಗರತ್ನ ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕೊಠಡಿಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರಿಗೆ ಅಚ್ಚರಿ ಕಾದಿತ್ತು. ಏಕೆಂದರೆ ಪತಿಯೇ ಪತ್ನಿ ಕೊಲೆಗೆ ಸುಫಾರಿ ನೀಡಿದ್ದ ವಿಚಾರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರು ನಾಗರತ್ನ ಅವರ ಪತಿ ಮಹೇಶ್‌ನನ್ನು ವಶಕ್ಕೆ ಪಡೆದಿದ್ದು, ಸುಫಾರಿ ಪಡೆದಿದ್ದ ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ.

ನಡೆದದ್ದಾದರೂ ಏನು?:
ಪಾನೀಪುರಿ ವ್ಯಾಪಾರಿಯಾಗಿದ್ದ ಮಹೇಶ್ ಹಾಗೂ ನಾಗರತ್ನ ಅವರಿಗೆ ೧೮ ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ ಮಕ್ಕಳಿರಲಿಲ್ಲ. ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ನಾಗರತ್ನ ಪತಿಯನ್ನು ಕೀಳಾಗಿ ನೋಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:-ಹೊಸ ವರ್ಷ ಸಂಭ್ರಮ | ಮಾರ್ಗಸೂಚಿ ಪ್ರಕಟ ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಸಾರ್ವಜನಿಕವಾಗಿ ನಿಂದಿಸುತ್ತಿದ್ದುದಲ್ಲದೆ, ನಿನ್ನ ಕೈಲಿ ಏನೂ ಆಗುವುದಿಲ್ಲ ಎಂದು ನೆಂಟರಿಷ್ಟರ ಸಮ್ಮುಖದಲ್ಲಿಯೇ ಮೂದಲಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ರೋಸಿ ಹೋಗಿದ್ದ ಪತಿ ಮಹೇಶ್ ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದಾನೆ.
ನಂತರ ಪರಿಚಿತರ ಮೂಲಕ ಆತನಿಗೆ ಕೊಡಗಿನ ವಿರಾಜಪೇಟೆ ನಿವಾಸಿಗಳಾದ ಭಾಸ್ಕರ್ ಹಾಗೂ ಅಭಿ ಎಂಬವರ ಪರಿಚಯವಾಗಿದೆ. ಹೀಗಾಗಿ ಪತ್ನಿಯನ್ನು ಹತ್ಯೆ ಮಾಡುವಂತೆ ಅವರಿಗೆ ಸುಫಾರಿ ನೀಡಿದ್ದಾನೆ. ಹತ್ಯೆಯ ನಂತರ ೫ ಲಕ್ಷ ರೂ. ನೀಡುವುದಾಗಿ ಹೇಳಿದ್ದಾನೆ.

ಅದರಂತೆ ಮಂಗಳವಾರ ರಾತ್ರಿ ಮಹೇಶ್ ಮನೆಗೆ ತೆರಳಿದ ಯುವಕರು ನಾಗರತ್ನ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆಕೆ ಇದ್ದ ಕೊಠಡಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸ್ಥಳೀಯರು ಮಹೇಶ್‌ಗೆ ವಿಚಾರ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಅವರು ಏನೂ ಅರಿಯದವರಂತೆ ನಾಗರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ನಂತರ ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ವಿಚಾರಣೆ ಆರಂಭಿಸಿದ ಪೊಲೀಸರಿಗೆ ಮಹೇಶ್ ವರ್ತನೆ ಅನುಮಾನ ಮೂಡಿಸಿದೆ. ನಂತರ ಅವರು ತಮ್ಮದೇ ಆದ ರೀತಿಯಲ್ಲಿ ವಿಚಾರಣೆ ನಡೆಸಿದ ವೇಳೆ ಇಡೀ ಪ್ರಕರಣ ಬೆಳಕಿಗೆ ಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

25 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

27 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

30 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

5 hours ago