ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ನಡೆದ 24 ಗಂಟೆಯಲ್ಲಿ ಆರೋಪಿ ಪತ್ತೆ ಹಚ್ಚಲಾಗಿದೆ. ಈ ಕೊಲೆಯ ಪ್ರಮುಖ ಆರೋಪಿ ಸಿದ್ದೇಶ್ ಮೇಸ್ತ್ರಿಯಾಗಿದ್ದ. ಆರೋಪಿ ಸಿದ್ದೇಶ್ನನ್ನು ಜವರಪ್ಪ ತನ್ನ ಮನೆಗೆ ಒಮ್ಮೆ ಕರೆದುಕೊಂಡು ಹೋಗಿದ್ದ. ಈ ವೇಳೆ ಜವರಪ್ಪನ ಹೆಂಡತಿ ಅಮೃತ ಪರಿಚಯವಾಗುತ್ತಾಳೆ. ಬಳಿಕ ಫೋನ್ ನಂಬರ್ ಪಡೆದು ಮಾತುಕತೆ ನಡೆಸುತ್ತಿರುತ್ತಾರೆ.
ಈ ವಿಚಾರವಾಗಿ ಆಗಾಗ ಪತಿ-ಪತ್ನಿ ನಡುವೆ ಸಣ್ಣ ಪುಟ್ಟದಾಗಿ ಗಲಾಟೆಯಾಗುತ್ತಿತ್ತು. ಪತ್ನಿ ಯಾವಾಗಲು ಫೋನ್ನಲ್ಲಿ ಹೆಚ್ಚು ಮಾತನಾಡುತ್ತಿರುತ್ತಾಳೆ ಎಂದು ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಇದೇ ಏಪ್ರಿಲ್.14ರಂದು ಅಮೃತ ತನ್ನ ಮಕ್ಕಳ ಜೊತೆ ತವರು ಮನೆಗೆ ಹೋಗಿರುತ್ತಾಳೆ. ಈ ವೇಳೆ ಹೆಂಡತಿ ನೋಡಲು ಬರುತ್ತೇನೆ ಎಂದು ಹೆಂಡತಿಗೂ ಮಾಹಿತಿ ನೀಡಿದ್ದ. ಗಂಡ ಬರುವ ಮಾಹಿತಿಯನ್ನು ಆರೋಪಿ ಸಿದ್ದೇಶ್ಗೆ ಅಮೃತ ತಿಳಿಸಿರುತ್ತಾಳೆ. ತನ್ನ ಗಂಡನ ಎಲ್ಲಾ ಚಲನವಲನವನ್ನು ಸಿದ್ದೇಶ್ಗೆ ಮಾಹಿತಿ ನೀಡುತ್ತಿರುತ್ತಾಳೆ. ಪತಿ ಇದ್ರೆ ಇಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಕೊಲೆಗೆ ಸಂಚು ರೂಪಿಸಿದ್ದಾರೆ. ಸಿದ್ದೇಶ್ ತನ್ನ ಕಾರಿನಲ್ಲಿ ಮೃತ ಜವರಪ್ಪನನ್ನು ಬಾರ್ ಗೆ ಕರೆದುಕೊಂಡು ಹೋಗುತ್ತಾನೆ. ಈ ವೇಳೆ ಕಂಠ ಪೂರ್ತಿ ಕುಡಿಸಿ ಮನೆಗೆ ಬಿಡುವುದಾಗಿ ತಿಳಿಸುತ್ತಾನೆ. ಬಳಿಕ ಕಾರಿನಲ್ಲಿ ಬರುವ ವೇಳೆ ಮಾರ್ಗ ಮದ್ಯೆ ಜವರಪ್ಪನನ್ನು ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡುತ್ತಾನೆ. ನಂತರ ಮೃತ ದೇಹವನ್ನು ರಸ್ತೆಯಲ್ಲಿ ಬಿಸಾಡಿ ಅಪಘಾತ ಎಂದು ಬಿಂಬಿಸಲು ಮುಂದಾಗುತ್ತಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತ ದೇಹದ ಗಾಯದ ಗುರುತನ್ನು ಗಮನಿಸಿ ಕೊಲೆ ಶಂಕೆ ವ್ಯಕ್ತಪಡಿಸುತ್ತಾರೆ. ಕೊಲೆ ಸಂಬಂಧ ಸ್ಥಳಕ್ಕೆ ನಾನು ಭೇಟಿ ನೀಡಿ ಎರಡು ತಂಡ ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆ ಅವಧಿಯಲ್ಲಿ ಕೊಲೆಯ ರಹಸ್ಯ ಬಯಲಾಗಿದೆ. ಆರೋಪಿಯನ್ನು ಬಂದಿಸಲಾಗಿದೆ. ಈ ಕೊಲೆಯ ಸಂಚಿನಲ್ಲಿ ಅಮೃತಾಳ ಕೈವಾಡವು ಇದೆ ಎಂದು ಮಾಹಿತಿ ನೀಡಿದರು.
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ…
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…