ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ನಡೆದ 24 ಗಂಟೆಯಲ್ಲಿ ಆರೋಪಿ ಪತ್ತೆ ಹಚ್ಚಲಾಗಿದೆ. ಈ ಕೊಲೆಯ ಪ್ರಮುಖ ಆರೋಪಿ ಸಿದ್ದೇಶ್ ಮೇಸ್ತ್ರಿಯಾಗಿದ್ದ. ಆರೋಪಿ ಸಿದ್ದೇಶ್ನನ್ನು ಜವರಪ್ಪ ತನ್ನ ಮನೆಗೆ ಒಮ್ಮೆ ಕರೆದುಕೊಂಡು ಹೋಗಿದ್ದ. ಈ ವೇಳೆ ಜವರಪ್ಪನ ಹೆಂಡತಿ ಅಮೃತ ಪರಿಚಯವಾಗುತ್ತಾಳೆ. ಬಳಿಕ ಫೋನ್ ನಂಬರ್ ಪಡೆದು ಮಾತುಕತೆ ನಡೆಸುತ್ತಿರುತ್ತಾರೆ.
ಈ ವಿಚಾರವಾಗಿ ಆಗಾಗ ಪತಿ-ಪತ್ನಿ ನಡುವೆ ಸಣ್ಣ ಪುಟ್ಟದಾಗಿ ಗಲಾಟೆಯಾಗುತ್ತಿತ್ತು. ಪತ್ನಿ ಯಾವಾಗಲು ಫೋನ್ನಲ್ಲಿ ಹೆಚ್ಚು ಮಾತನಾಡುತ್ತಿರುತ್ತಾಳೆ ಎಂದು ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಇದೇ ಏಪ್ರಿಲ್.14ರಂದು ಅಮೃತ ತನ್ನ ಮಕ್ಕಳ ಜೊತೆ ತವರು ಮನೆಗೆ ಹೋಗಿರುತ್ತಾಳೆ. ಈ ವೇಳೆ ಹೆಂಡತಿ ನೋಡಲು ಬರುತ್ತೇನೆ ಎಂದು ಹೆಂಡತಿಗೂ ಮಾಹಿತಿ ನೀಡಿದ್ದ. ಗಂಡ ಬರುವ ಮಾಹಿತಿಯನ್ನು ಆರೋಪಿ ಸಿದ್ದೇಶ್ಗೆ ಅಮೃತ ತಿಳಿಸಿರುತ್ತಾಳೆ. ತನ್ನ ಗಂಡನ ಎಲ್ಲಾ ಚಲನವಲನವನ್ನು ಸಿದ್ದೇಶ್ಗೆ ಮಾಹಿತಿ ನೀಡುತ್ತಿರುತ್ತಾಳೆ. ಪತಿ ಇದ್ರೆ ಇಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಕೊಲೆಗೆ ಸಂಚು ರೂಪಿಸಿದ್ದಾರೆ. ಸಿದ್ದೇಶ್ ತನ್ನ ಕಾರಿನಲ್ಲಿ ಮೃತ ಜವರಪ್ಪನನ್ನು ಬಾರ್ ಗೆ ಕರೆದುಕೊಂಡು ಹೋಗುತ್ತಾನೆ. ಈ ವೇಳೆ ಕಂಠ ಪೂರ್ತಿ ಕುಡಿಸಿ ಮನೆಗೆ ಬಿಡುವುದಾಗಿ ತಿಳಿಸುತ್ತಾನೆ. ಬಳಿಕ ಕಾರಿನಲ್ಲಿ ಬರುವ ವೇಳೆ ಮಾರ್ಗ ಮದ್ಯೆ ಜವರಪ್ಪನನ್ನು ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡುತ್ತಾನೆ. ನಂತರ ಮೃತ ದೇಹವನ್ನು ರಸ್ತೆಯಲ್ಲಿ ಬಿಸಾಡಿ ಅಪಘಾತ ಎಂದು ಬಿಂಬಿಸಲು ಮುಂದಾಗುತ್ತಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತ ದೇಹದ ಗಾಯದ ಗುರುತನ್ನು ಗಮನಿಸಿ ಕೊಲೆ ಶಂಕೆ ವ್ಯಕ್ತಪಡಿಸುತ್ತಾರೆ. ಕೊಲೆ ಸಂಬಂಧ ಸ್ಥಳಕ್ಕೆ ನಾನು ಭೇಟಿ ನೀಡಿ ಎರಡು ತಂಡ ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆ ಅವಧಿಯಲ್ಲಿ ಕೊಲೆಯ ರಹಸ್ಯ ಬಯಲಾಗಿದೆ. ಆರೋಪಿಯನ್ನು ಬಂದಿಸಲಾಗಿದೆ. ಈ ಕೊಲೆಯ ಸಂಚಿನಲ್ಲಿ ಅಮೃತಾಳ ಕೈವಾಡವು ಇದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…