ಮೈಸೂರು ನಗರ

ನನಗೂ ಸಚಿವನಾಗುವ ಆಸೆಯಿದೆ: ಉಪಸಭಾಪತಿ ರುದ್ರಪ್ಪ ಲಮಾಣಿ

ಮೈಸೂರು: ನನಗೂ ಸಚಿವನಾಗುವ ಆಸೆಯಿದ್ದು, ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಮಂತ್ರಿಯಾಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಅಂತಿಮ ಕ್ಷಣದಲ್ಲಿ ನನ್ನ ಹೆಸರನ್ನು ಬದಲಾಯಿಸಲಾಯಿತು. ಪಕ್ಷದ ನಾಯಕರೆಲ್ಲಾ ಮನವೊಲಿಸಿ ಉಪಸಭಾಪತಿ ಸ್ಥಾನ ನೀಡಿದರು ಎಂದರು.

ಇನ್ನು ನಮ್ಮ ಸಮುದಾಯ ನಿರಂತರವಾಗಿ ಕಾಂಗ್ರೆಸ್‌ ಬೆಂಬಲಿಸುತ್ತಾ ಬಂದಿದೆ. ಹೀಗಾಗಿ ಈ ಬಾರಿ ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲರಿಗೂ ಆಸೆಯಿರುವಂತೆ ನನಗೂ ಮಂತ್ರಿಯಾಗಬೇಕೆಂಬ ಆಸೆಯಿದೆ ಎಂದರು.

ಈ ಮೂಲಕ ರಾಜ್ಯ ಸರ್ಕಾರದಲ್ಲಿ ಮತ್ತೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ ಎನ್ನಲಾಗಿದ್ದು, ಕೆಲ ಶಾಸಕರು ಸದ್ದಿಲ್ಲದೇ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆಂದೋಲನ ಡೆಸ್ಕ್

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

1 hour ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

2 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

2 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

2 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

2 hours ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

12 hours ago