ಮೈಸೂರು ನಗರ

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ತೀರ್ಮಾನ ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೊಸ ಸರ್ಕಾರ ನಾಯಕರನ್ನು ಆಯ್ಕೆ ಮಾಡಬೇಕಿದೆ. ಡಿಕೆ ಶಿವಕುಮಾರ್ ಬೆಂಬಲಕ್ಕೆ ವರಿಷ್ಠರು ಹಾಗೂ ಶಾಸಕರು ಇದ್ದಾರೆ ಎನ್ನುವ ನಂಬಿಕೆ ಇದೆ. ಹಾಲಿ ಸಚಿವರುಗಳು ತ್ಯಾಗ ಮಾಡಿದ್ದಲ್ಲಿ ಹೊಸಬರಿಗೆ ಅವಕಾಶ ಸಿಗಲಿದೆ. ಅನುಭವ ಇರುವವರು ಹಾಗೂ ಹೊಸತನದಲ್ಲಿ ಆಡಳಿತ ನಡೆಸುವವರಿಗೆ ಅವಕಾಶ ಸಿಗಬೇಕು. ಹೊಸ ನಾಯಕರನ್ನು ಆಯ್ಕೆ ಮಾಡಬೇಕು ಎನ್ನುವ ಅಪೇಕ್ಷೆ ನನ್ನಲ್ಲಿದೆ. ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ. ಪಕ್ಷ ನನ್ನನ್ನು ಗುರುತಿಸಲಿದೆ ಎನ್ನುವ ನಂಬಿಕೆ ಇದೆ. ಈ ಬಗ್ಗೆ ವರಿಷ್ಠರ ಜೊತೆ ಮಾತುಕತೆ ನಡೆಸಿಲ್ಲ ಎಂದರು.

ಇನ್ನು ಕಳೆದ ಬಾರಿ ನಮ್ಮ ಜಿಲ್ಲೆಯವರೇ ಸಿಎಂ ಆಗಿದ್ದರಿಂದ ಈ ಜಿಲ್ಲೆಯಲ್ಲಿ ನನಗೆ ಅವಕಾಶ ಸಿಗಲಿಲ್ಲ. ಈ ಬಾರೀ ಅನ್ಯ ಜಿಲ್ಲೆಯವರು ಸಿಎಂ ಆಗುವುದರಿಂದ ನನಗೆ ಅವಕಾಶ ಸಿಗಲಿದೆ. ಎಲ್ಲವೂ ಸುಗಮವಾಗಿ ಆಗಬೇಕು. ನಾನು ಪಕ್ಷ ಹಾಗೂ ಪಕ್ಷದ ಸಿದ್ಧಾಂತ ನಂಬಿದ್ದೇನೆ. ಡಿಕೆ ಶಿವಕುಮಾರ್ ಅಥವಾ ಯಾರೇ ಮುಖ್ಯಮಂತ್ರಿ ಆದರೂ ನನ್ನನ್ನು ಗುರುತಿಸಲಿದ್ದಾರೆ ಎನ್ನುವ ನಂಬಿಕೆ ಇದೆ. ಹೊಸಬರಿಗೆ ಹೊಸ ನಾಯಕತ್ವ ಸೃಷ್ಟಿಸುವ ಜೊತೆಗೆ ಸಂಪುಟದಲ್ಲಿ ಅನುಭವ, ಹಿರಿತನ ಹಾಗೂ ಹೊಸಬರನ್ನು ಗುರುತಿಸಿ ಸರ್ಕಾರ ರಚಿಸಬೇಕಿದೆ. ಖಂಡಿತ ಈ ಬಾರೀ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವನಾಗುವ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

16 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

16 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

17 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

17 hours ago