ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ತೀರ್ಮಾನ ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೊಸ ಸರ್ಕಾರ ನಾಯಕರನ್ನು ಆಯ್ಕೆ ಮಾಡಬೇಕಿದೆ. ಡಿಕೆ ಶಿವಕುಮಾರ್ ಬೆಂಬಲಕ್ಕೆ ವರಿಷ್ಠರು ಹಾಗೂ ಶಾಸಕರು ಇದ್ದಾರೆ ಎನ್ನುವ ನಂಬಿಕೆ ಇದೆ. ಹಾಲಿ ಸಚಿವರುಗಳು ತ್ಯಾಗ ಮಾಡಿದ್ದಲ್ಲಿ ಹೊಸಬರಿಗೆ ಅವಕಾಶ ಸಿಗಲಿದೆ. ಅನುಭವ ಇರುವವರು ಹಾಗೂ ಹೊಸತನದಲ್ಲಿ ಆಡಳಿತ ನಡೆಸುವವರಿಗೆ ಅವಕಾಶ ಸಿಗಬೇಕು. ಹೊಸ ನಾಯಕರನ್ನು ಆಯ್ಕೆ ಮಾಡಬೇಕು ಎನ್ನುವ ಅಪೇಕ್ಷೆ ನನ್ನಲ್ಲಿದೆ. ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ. ಪಕ್ಷ ನನ್ನನ್ನು ಗುರುತಿಸಲಿದೆ ಎನ್ನುವ ನಂಬಿಕೆ ಇದೆ. ಈ ಬಗ್ಗೆ ವರಿಷ್ಠರ ಜೊತೆ ಮಾತುಕತೆ ನಡೆಸಿಲ್ಲ ಎಂದರು.
ಇನ್ನು ಕಳೆದ ಬಾರಿ ನಮ್ಮ ಜಿಲ್ಲೆಯವರೇ ಸಿಎಂ ಆಗಿದ್ದರಿಂದ ಈ ಜಿಲ್ಲೆಯಲ್ಲಿ ನನಗೆ ಅವಕಾಶ ಸಿಗಲಿಲ್ಲ. ಈ ಬಾರೀ ಅನ್ಯ ಜಿಲ್ಲೆಯವರು ಸಿಎಂ ಆಗುವುದರಿಂದ ನನಗೆ ಅವಕಾಶ ಸಿಗಲಿದೆ. ಎಲ್ಲವೂ ಸುಗಮವಾಗಿ ಆಗಬೇಕು. ನಾನು ಪಕ್ಷ ಹಾಗೂ ಪಕ್ಷದ ಸಿದ್ಧಾಂತ ನಂಬಿದ್ದೇನೆ. ಡಿಕೆ ಶಿವಕುಮಾರ್ ಅಥವಾ ಯಾರೇ ಮುಖ್ಯಮಂತ್ರಿ ಆದರೂ ನನ್ನನ್ನು ಗುರುತಿಸಲಿದ್ದಾರೆ ಎನ್ನುವ ನಂಬಿಕೆ ಇದೆ. ಹೊಸಬರಿಗೆ ಹೊಸ ನಾಯಕತ್ವ ಸೃಷ್ಟಿಸುವ ಜೊತೆಗೆ ಸಂಪುಟದಲ್ಲಿ ಅನುಭವ, ಹಿರಿತನ ಹಾಗೂ ಹೊಸಬರನ್ನು ಗುರುತಿಸಿ ಸರ್ಕಾರ ರಚಿಸಬೇಕಿದೆ. ಖಂಡಿತ ಈ ಬಾರೀ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವನಾಗುವ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…