ಮೈಸೂರು ನಗರ

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ವಿಚಾರ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ‌. ನಾಯಕ ಸಮುದಾಯಕ್ಕೆ ಅವಕಾಶ ಸಿಗಬೇಕು ಅನ್ನೋದು ಎಲ್ಲರ ಬೇಡಿಕೆಯಾಗಿದ್ದು, ದಕ್ಷಿಣ ಭಾಗದಲ್ಲಿ ನಾಯಕ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಅವಕಾಶ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ:-ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಇನ್ನು ಮುಂದುವರಿದು ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಸಿಎಂ ಆಗಿರಬೇಕು. ಜನಾಭಿಪ್ರಾಯ ಸಿದ್ದರಾಮಯ್ಯ ಪರ ಇದೆ. ನವೆಂಬರ್.20ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಾರೆ. ಆಗ ಇದನ್ನ ಅವರೇ ಹೇಳಬಹುದು. ಮುಂದಿನ ಚುನಾವಣೆಯಲ್ಲೂ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ. ಸಿದ್ದರಾಮಯ್ಯನವರ ಅವಶ್ಯಕತೆ ಪಕ್ಷಕ್ಕೆ ಇದೆ. ಮುಂದಿನ ಅವಧಿಯಲ್ಲಿ ಬೇರೆಯವರಿಗೆ ಸಿಎಂ ಅವಕಾಶ ಸಿಗಬಹುದು. 2028ಕ್ಕೆ ಸತೀಶ್ ಜಾರಿಕಿಹೊಳಿ ಸಿಎಂ ಆಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಸಮುದಾಯದಲ್ಲಿ ಸಿಎಂ‌ ಸ್ಥಾನಕ್ಕೆ ಅರ್ಹ ಇರುವ ವ್ಯಕ್ತಿ ಸತೀಶ್ ಜಾರಕಿಹೊಳಿ. ಸಿಎಂ ಸಿದ್ದರಾಮಯ್ಯನವರಂತೆ ಸತೀಶ್‌ ಜಾರಕಿಹೊಳಿ ಸಾಮಾಜಿಕ ಬದ್ಧತೆಯನ್ನು ಹೊಂದಿದ್ದಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago