ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಎ.ಆರ್.ಕೃಷ್ಣಮೂರ್ತಿ

ಮೈಸೂರು: ಕೊಳ್ಳೇಗಾಲದ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ತಿಳಿಸಿದ್ದು, ಸಚಿವ ಸಂಪುಟ ಪುನರ್‌ ರಚನೆಯ ಬಗ್ಗೆ ಸುಳಿವು ನೀಡಿದರು.

ಈ ಕುರಿತು ಮೈಸೂರಿನಲ್ಲಿ ಇಂದು( ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಸಚಿವ ಸ್ಥಾನ ನಿಭಾಯಿಸುವ ಬುದ್ಧಿಶಕ್ತಿಯಿದೆ. ರಾಜ್ಯಸರ್ಕಾರದ ಸಚಿವ ಸಂಪುಟ ಪುನರ್‌ ರಚನೆ ವಿಚಾರ ಈಗಾಗಲೇ ಮುನ್ನೆಲೆಗೆ ಬಂದಿದ್ದು, ಸಂಪುಟ ಪುನರ್‌ ರಚನೆ ಆದರೂ ಆಗಬಹುದು ಎಂದರು.

ಇದೇ ವೇಳೆ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್‌ ವಿಚಾರ ಕುರಿತು ಮಾತನಾಡಿದ ಅವರು, ನನಗೆ ಬಿಜೆಪಿಯಿಂದ ಯಾವುದೇ ಆಫರ್‌ ಬಂದಿಲ್ಲ. ಆಫರ್‌ ಬಂದರು ನಾನು ಹೋಗುವುದಿಲ್ಲ, ಏಕೆಂದರೆ ನಾನು ಬಿಜೆಪಿ ಪಕ್ಷದಲ್ಲಿದ್ದಾಗ ಅನಂತ್‌ ಕುಮಾರ್‌ ಹೆಗ್ಡೆ ಹೇಳಿಕೆಗಳನ್ನು ಖಂಡಿಸಿದ್ದೇನೆ. ಅಲ್ಲದೇ ನನ್ನ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ ಎಂದು ಭಾವಿಸಿ ಬಿಜೆಪಿಯನ್ನೇ ಬಿಟ್ಟು ಬಂದಿದ್ದೇನೆ. ಹೀಗಾಗಿ ಯಾವುದೇ ಆಫರ್‌ ಬಂದರು ನಾನು ಬಿಜೆಪಿಗೆ ಹೋಗುವುದಿಲ್ಲ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

13 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

16 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

17 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

18 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

18 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

18 hours ago