ಮೈಸೂರು ನಗರ

ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು ಇದೆ. ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ನನಗೆ ದೇವರಾಜ ಅರಸು ದಾಖಲೆಯ ಬಗ್ಗೆ ಅರಿವು ಇರಲಿಲ್ಲ. ಯಾವ ದಾಖಲೆ ಮುರಿಯಬೇಕು ಎಂಬುದು ನನ್ನ ಗಮನದಲ್ಲಿ ಇರಲಿಲ್ಲ. ಜನರ ಆಶೀರ್ವಾದದಿಂದ ಎಲ್ಲವೂ ನಡೆದು ಹೋಗಿದೆ. ಇವತ್ತು ದೇವರಾಜ ಅರಸು ದಾಖಲೆ ಸರಿಗಟ್ಟಿದ್ದೇನೆ. ದೇವರಾಜ ಅರಸು ರಾಜಕಾರಣದ ಸಮಯವೇ ಬೇರೆ.
ಇವತ್ತಿನ ಸಮಯವೇ ಬೇರೆ. ಜನರ ಆಶೀರ್ವಾದದಿಂದ ಅಷ್ಟೇ ನಾನು ಇಲ್ಲಿಯ ತನಕ ಬಂದಿದ್ದೇನೆ. ಇಲ್ಲಿವರೆಗಿನ ರಾಜಕೀಯ ನನಗೆ ತೃಪ್ತಿ ಕೊಟ್ಟಿದೆ. ಜನರಿಗೆ ಇನ್ನಷ್ಟು ಕೆಲಸ ಮಾಡಬೇಕಿದೆ. ನಾನು ಒಂದು ಬಾರಿ ಎಂಎಲ್ಎ ಆದರೆ ಸಾಕು ಅಂದುಕೊಂಡಿದೆ. ಆದರೆ ಎಂಎಲ್ಎ ಡಿಸಿಎಂ ಸಿಎಂ ಎಲ್ಲ ಆಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ರಾಜ್ಯದ ಹಲವಡೆ ಸಿಎಂ ಹೆಸರಿನಲ್ಲಿ ನಾಟಿ ಕೋಳಿ ಪಲಾವ್ ಹಂಚಿಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರು ನಾಟಿ ಕೋಳಿ ಪಲಾವ್ ಹಂಚುತ್ತಿದ್ದಾರೆ ನನಗೆ ಗೊತ್ತಿಲ್ಲ. ನಾನು ಹಳ್ಳಿಯಿಂದ ಬಂದವನು. ಸಹಜವಾಗಿ ನನಗೆ ನಾಟಿ ಕೋಳಿ ಇಷ್ಟ. ನನ್ನಂತಯೇ ಹಳ್ಳಿಯಿಂದ ಬಂದವರಿಗೆ ನಾಟಿ ಕೋಳಿ ಊಟ ಇಷ್ಟ ಇರುತ್ತದೆ. ನಾನು ಮೊದಲು ಹೆಚ್ಚು ನಾಟಿ ಕೋಳಿ ತಿನ್ನುತ್ತಿದ್ದೆ. ಈಗ ಕಡಿಮೆ ಮಾಡಿದ್ದೇನೆ. ಇಂದು ಯಾರ್ಯಾರು ಹಂಚಿದ್ದಾರೆ ನನ್ನ ಗಮನದಲ್ಲೂ ಇಲ್ಲ ಬಿಡಿ ಎಂದು ಹೇಳಿದರು.

ಇನ್ನು ನಿನ್ನೆ ವೇಣುಗೋಪಾಲ್ ಭೇಟಿ ವಿಚಾರ‌ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರು ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಹೋಗಿ ದೆಹಲಿಗೆ ಹೋಗುತ್ತಿದ್ದರು. ಹೀಗಾಗಿ ಅವರನ್ನ ಭೇಟಿಯಾಗಿದ್ದೇನೆ ಅಷ್ಟೇ. ಯಾವ ರಾಜಕಾರಣವೂ ಚರ್ಚೆ ಆಗಿಲ್ಲ. ಸಂಪುಟ ಪುನಾರಚನೆ ಬಗ್ಗೆಯೂ ಅವರ ಬಳಿ ಚರ್ಚೆ ಮಾಡಿಲ್ಲ. ಸಂಪುಟ ಪುನರ್‌ ರಚನೆ ವಿಚಾರದಲ್ಲಿ ಹೈಕಮಾಂಡ್ ಯಾವತ್ತು ದೆಹಲಿಗೆ ಕರೆಯುತ್ತದೆ ಅವತ್ತು ದೆಹಲಿಗೆ ಹೋಗುತ್ತೇನೆ. ಬಜೆಟ್‌ನಲ್ಲಿ ಏನೇನು ವಿಶೇಷತೆ ಇರುತ್ತದೆ ಅಂದೇ ನೋಡಿ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

29 seconds ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

27 mins ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

2 hours ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

3 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

3 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

3 hours ago