ಮೈಸೂರು ನಗರ

ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು ಇದೆ. ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ನನಗೆ ದೇವರಾಜ ಅರಸು ದಾಖಲೆಯ ಬಗ್ಗೆ ಅರಿವು ಇರಲಿಲ್ಲ. ಯಾವ ದಾಖಲೆ ಮುರಿಯಬೇಕು ಎಂಬುದು ನನ್ನ ಗಮನದಲ್ಲಿ ಇರಲಿಲ್ಲ. ಜನರ ಆಶೀರ್ವಾದದಿಂದ ಎಲ್ಲವೂ ನಡೆದು ಹೋಗಿದೆ. ಇವತ್ತು ದೇವರಾಜ ಅರಸು ದಾಖಲೆ ಸರಿಗಟ್ಟಿದ್ದೇನೆ. ದೇವರಾಜ ಅರಸು ರಾಜಕಾರಣದ ಸಮಯವೇ ಬೇರೆ.
ಇವತ್ತಿನ ಸಮಯವೇ ಬೇರೆ. ಜನರ ಆಶೀರ್ವಾದದಿಂದ ಅಷ್ಟೇ ನಾನು ಇಲ್ಲಿಯ ತನಕ ಬಂದಿದ್ದೇನೆ. ಇಲ್ಲಿವರೆಗಿನ ರಾಜಕೀಯ ನನಗೆ ತೃಪ್ತಿ ಕೊಟ್ಟಿದೆ. ಜನರಿಗೆ ಇನ್ನಷ್ಟು ಕೆಲಸ ಮಾಡಬೇಕಿದೆ. ನಾನು ಒಂದು ಬಾರಿ ಎಂಎಲ್ಎ ಆದರೆ ಸಾಕು ಅಂದುಕೊಂಡಿದೆ. ಆದರೆ ಎಂಎಲ್ಎ ಡಿಸಿಎಂ ಸಿಎಂ ಎಲ್ಲ ಆಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ರಾಜ್ಯದ ಹಲವಡೆ ಸಿಎಂ ಹೆಸರಿನಲ್ಲಿ ನಾಟಿ ಕೋಳಿ ಪಲಾವ್ ಹಂಚಿಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರು ನಾಟಿ ಕೋಳಿ ಪಲಾವ್ ಹಂಚುತ್ತಿದ್ದಾರೆ ನನಗೆ ಗೊತ್ತಿಲ್ಲ. ನಾನು ಹಳ್ಳಿಯಿಂದ ಬಂದವನು. ಸಹಜವಾಗಿ ನನಗೆ ನಾಟಿ ಕೋಳಿ ಇಷ್ಟ. ನನ್ನಂತಯೇ ಹಳ್ಳಿಯಿಂದ ಬಂದವರಿಗೆ ನಾಟಿ ಕೋಳಿ ಊಟ ಇಷ್ಟ ಇರುತ್ತದೆ. ನಾನು ಮೊದಲು ಹೆಚ್ಚು ನಾಟಿ ಕೋಳಿ ತಿನ್ನುತ್ತಿದ್ದೆ. ಈಗ ಕಡಿಮೆ ಮಾಡಿದ್ದೇನೆ. ಇಂದು ಯಾರ್ಯಾರು ಹಂಚಿದ್ದಾರೆ ನನ್ನ ಗಮನದಲ್ಲೂ ಇಲ್ಲ ಬಿಡಿ ಎಂದು ಹೇಳಿದರು.

ಇನ್ನು ನಿನ್ನೆ ವೇಣುಗೋಪಾಲ್ ಭೇಟಿ ವಿಚಾರ‌ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರು ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಹೋಗಿ ದೆಹಲಿಗೆ ಹೋಗುತ್ತಿದ್ದರು. ಹೀಗಾಗಿ ಅವರನ್ನ ಭೇಟಿಯಾಗಿದ್ದೇನೆ ಅಷ್ಟೇ. ಯಾವ ರಾಜಕಾರಣವೂ ಚರ್ಚೆ ಆಗಿಲ್ಲ. ಸಂಪುಟ ಪುನಾರಚನೆ ಬಗ್ಗೆಯೂ ಅವರ ಬಳಿ ಚರ್ಚೆ ಮಾಡಿಲ್ಲ. ಸಂಪುಟ ಪುನರ್‌ ರಚನೆ ವಿಚಾರದಲ್ಲಿ ಹೈಕಮಾಂಡ್ ಯಾವತ್ತು ದೆಹಲಿಗೆ ಕರೆಯುತ್ತದೆ ಅವತ್ತು ದೆಹಲಿಗೆ ಹೋಗುತ್ತೇನೆ. ಬಜೆಟ್‌ನಲ್ಲಿ ಏನೇನು ವಿಶೇಷತೆ ಇರುತ್ತದೆ ಅಂದೇ ನೋಡಿ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago