ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ ಆಯ್ಕೆ ಆಗಿರುವುದು. ಅದನ್ನು ನಾವು ಹಲವು ಬಾರಿ ಹೇಳಿದ್ದೇವೆ. ಮುಖ್ಯಮಂತ್ರಿಗಳು ಕೂಡ ಹಲವು ಬಾರಿ ಹೇಳಿದ್ದಾರೆ. ಮತ್ತೆ ಮತ್ತೆ ಈ ಪ್ರಶ್ನೆಗಳನ್ನು ಕೇಳುವುದು ಬೇಡ. ಈ ರೀತಿಯ ಎಲ್ಲಾ ಚರ್ಚೆಗಳು ನಿಲ್ಲಬೇಕಿದೆ. ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಆ ರೀತಿ ಮಾತನಾಡಿಲ್ಲ. ನಾನು ಅಧಿಕಾರ ಹಂಚಿಕೆಯ ನಿರ್ಧಾರ ಮಾಡುವ ಸ್ಥಾನದಲ್ಲೂ ನಾನು ಇಲ್ಲ. ನಾನು ಯಾವ ಸಿಎಂ ರೇಸ್ನಲ್ಲೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಕೆಪಿಸಿಸಿ ರೇಸ್ನಲ್ಲಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಅದು ಚರ್ಚೆಯ ಹಂತದಲ್ಲೂ ಇಲ್ಲ. ಅದೆಲ್ಲ ಬಂದಾಗ ನೋಡೊಣ ಎಂದು ಹೇಳಿದರು.
ಇನ್ನು ಬಳ್ಳಾರಿ ಗಲಾಟೆ ಪ್ರಕರಣವನ್ನು ನ್ಯಾಯಾಧೀಶರ ತನಿಖೆಗೆ ಬಿಜೆಪಿ ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ವರದಿ ಬಂದಿಲ್ಲ. ವರದಿ ಬಂದ ಬಳಿಕ ನೋಡೋಣ. ಸರಿಯಾದ ರೀತಿ ತನಿಖೆ ಆಗ್ತಿದೆ. ಸಿಎಂ ಹಾಗೂ ಡಿಸಿಎಂ ಇದ್ದಾರೆ. ಅವರು ಈ ಬಗ್ಗೆ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…