ಮೈಸೂರು ನಗರ

ನನಗೆ ಸಿಎಂ ಸಿದ್ದರಾಮಯ್ಯ ಸ್ಥಿತಿ ಕಂಡು ಬೇಸರವಾಗಿದೆ: ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಈ ದೈನಸಿ ಸ್ಥಿತಿ ಬರಬಾರದಿತ್ತು. ಮೈಸೂರಿಗನಾಗಿ, ಕನ್ನಡಿಗನಾಗಿ ನನಗೆ ಸಿಎಂ ಸ್ಥಿತಿ ಕಂಡು ಬೇಸರವಾಗಿದೆ. ಇಂದಿರಾಗಾಂಧಿ, ಸೋನಿಯಾ ಗಾಂಧಿಯನ್ನೇ ಟೀಕೆ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ಅವರ ಮೊಮ್ಮಗನ ಪಾದ ಪೂಜೆ ಮಾಡಲು ಸಿದ್ಧವಾಗಿರೋದು ಬೇಸರ ತಂದಿದೆ. ಸಿಎಂ ಸಿದ್ದರಾಮಯ್ಯ ಅವರೇ ನೀವು ಹುಲಿಯಾನಾ‌ ಇಲಿಯಾನಾ ಹೇಳಿ? ಕಳೆದ 2013ರಲ್ಲಿ ಸಿದ್ದರಾಮಯ್ಯ ಹುಲಿಯಾ ಆಗಿದ್ದರು. ಈಗ ಸಿದ್ದರಾಮಯ್ಯ ಇಲಿಯಾಗಿದ್ದಾರೆ. ರಾಹುಲ್‌ ಗಾಂಧಿ ಭೇಟಿಗೆ ಸಿದ್ದರಾಮಯ್ಯ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ ಎಂದು ಹೇಳಿದರು.

ಇದನ್ನು ಓದಿ: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯ

ಇನ್ನು ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾವಂತರೆ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಇದು ಬಹಳ ಅಪಾಯಕಾರಿ. ಮುಸ್ಲಿಂಮರ ಸಮಸ್ಯೆ ಬಡತನ ಅಲ್ಲ.‌ ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೆ ಅವರ ಸಮಸ್ಯೆ. ವಿದ್ಯಾವಂತ ಮುಸ್ಲಿಂಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರಾ? ಸಿದ್ದರಾಮಯ್ಯರಂತಹ ನಾಯಕರು ಇರುವಾಗ ದೇಶದ ಒಳಗೆ ಇಂತಹ ಪರಿಸ್ಥಿತಿಯನ್ನು ನಾವು ಎದುರಿಸಲೇಬೇಕು.

ಸಿದ್ದರಾಮಯ್ಯ ಸರ್ಕಾರದ ಯೋಗ್ಯತೆಗೆ ಜೈಲಿನಲ್ಲಿನ ಭಯೋತ್ಪಾದಕನನ್ನೆ ಬಿಗಿ ಹಿಡಿಯಲು ಆಗುತ್ತಿಲ್ಲ. ಇನ್ನೂ ಇವರೇನೂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡೋದು. ಯುಪಿಎ ಸರಕಾರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ ಮೊದಲ ದೊಡ್ಡ ಸ್ಫೋಟ ಇದು. ಭಾರತದ ಒಳಗಿನ ಮುಲ್ಲಾಗಳೇ ಈ ರೀತಿಯ ಸ್ಫೋಟಕ್ಕೆ ತಯಾರಾಗುತ್ತಿದ್ದಾರೆ. ಮೊದಲು ಭಾರತದೊಳಗೆ ಬಾಂಬ್ ಇಡಲು ಪಾಕಿಸ್ತಾನದಿಂದ ಬರುತ್ತಿದ್ದರು. ಈಗ ನಮ್ಮ ದೇಶದೊಳಗೆ ಇಂತವರು ತಯಾರಾಗಿದ್ದಾರೆ. ದೇಶದ ಒಳಗಡೆ ಇಡುವವರೆ ಬಾಂಬ್ ಇಡಲು ಹೊರಟರೆ ಮೋದಿ ಅದನ್ನು ತಡಿಯಲು ಆಗುತ್ತಾ? ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 mins ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

27 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

52 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago