ಮೈಸೂರು ನಗರ

ನನಗೆ ಸಿಎಂ ಸಿದ್ದರಾಮಯ್ಯ ಸ್ಥಿತಿ ಕಂಡು ಬೇಸರವಾಗಿದೆ: ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಈ ದೈನಸಿ ಸ್ಥಿತಿ ಬರಬಾರದಿತ್ತು. ಮೈಸೂರಿಗನಾಗಿ, ಕನ್ನಡಿಗನಾಗಿ ನನಗೆ ಸಿಎಂ ಸ್ಥಿತಿ ಕಂಡು ಬೇಸರವಾಗಿದೆ. ಇಂದಿರಾಗಾಂಧಿ, ಸೋನಿಯಾ ಗಾಂಧಿಯನ್ನೇ ಟೀಕೆ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ಅವರ ಮೊಮ್ಮಗನ ಪಾದ ಪೂಜೆ ಮಾಡಲು ಸಿದ್ಧವಾಗಿರೋದು ಬೇಸರ ತಂದಿದೆ. ಸಿಎಂ ಸಿದ್ದರಾಮಯ್ಯ ಅವರೇ ನೀವು ಹುಲಿಯಾನಾ‌ ಇಲಿಯಾನಾ ಹೇಳಿ? ಕಳೆದ 2013ರಲ್ಲಿ ಸಿದ್ದರಾಮಯ್ಯ ಹುಲಿಯಾ ಆಗಿದ್ದರು. ಈಗ ಸಿದ್ದರಾಮಯ್ಯ ಇಲಿಯಾಗಿದ್ದಾರೆ. ರಾಹುಲ್‌ ಗಾಂಧಿ ಭೇಟಿಗೆ ಸಿದ್ದರಾಮಯ್ಯ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ ಎಂದು ಹೇಳಿದರು.

ಇದನ್ನು ಓದಿ: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯ

ಇನ್ನು ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾವಂತರೆ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಇದು ಬಹಳ ಅಪಾಯಕಾರಿ. ಮುಸ್ಲಿಂಮರ ಸಮಸ್ಯೆ ಬಡತನ ಅಲ್ಲ.‌ ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೆ ಅವರ ಸಮಸ್ಯೆ. ವಿದ್ಯಾವಂತ ಮುಸ್ಲಿಂಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರಾ? ಸಿದ್ದರಾಮಯ್ಯರಂತಹ ನಾಯಕರು ಇರುವಾಗ ದೇಶದ ಒಳಗೆ ಇಂತಹ ಪರಿಸ್ಥಿತಿಯನ್ನು ನಾವು ಎದುರಿಸಲೇಬೇಕು.

ಸಿದ್ದರಾಮಯ್ಯ ಸರ್ಕಾರದ ಯೋಗ್ಯತೆಗೆ ಜೈಲಿನಲ್ಲಿನ ಭಯೋತ್ಪಾದಕನನ್ನೆ ಬಿಗಿ ಹಿಡಿಯಲು ಆಗುತ್ತಿಲ್ಲ. ಇನ್ನೂ ಇವರೇನೂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡೋದು. ಯುಪಿಎ ಸರಕಾರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ ಮೊದಲ ದೊಡ್ಡ ಸ್ಫೋಟ ಇದು. ಭಾರತದ ಒಳಗಿನ ಮುಲ್ಲಾಗಳೇ ಈ ರೀತಿಯ ಸ್ಫೋಟಕ್ಕೆ ತಯಾರಾಗುತ್ತಿದ್ದಾರೆ. ಮೊದಲು ಭಾರತದೊಳಗೆ ಬಾಂಬ್ ಇಡಲು ಪಾಕಿಸ್ತಾನದಿಂದ ಬರುತ್ತಿದ್ದರು. ಈಗ ನಮ್ಮ ದೇಶದೊಳಗೆ ಇಂತವರು ತಯಾರಾಗಿದ್ದಾರೆ. ದೇಶದ ಒಳಗಡೆ ಇಡುವವರೆ ಬಾಂಬ್ ಇಡಲು ಹೊರಟರೆ ಮೋದಿ ಅದನ್ನು ತಡಿಯಲು ಆಗುತ್ತಾ? ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

16 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

19 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

25 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

29 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

37 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago