ಮೈಸೂರು ನಗರ

ನನಗೆ ಸಿಎಂ ಸಿದ್ದರಾಮಯ್ಯ ಸ್ಥಿತಿ ಕಂಡು ಬೇಸರವಾಗಿದೆ: ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಈ ದೈನಸಿ ಸ್ಥಿತಿ ಬರಬಾರದಿತ್ತು. ಮೈಸೂರಿಗನಾಗಿ, ಕನ್ನಡಿಗನಾಗಿ ನನಗೆ ಸಿಎಂ ಸ್ಥಿತಿ ಕಂಡು ಬೇಸರವಾಗಿದೆ. ಇಂದಿರಾಗಾಂಧಿ, ಸೋನಿಯಾ ಗಾಂಧಿಯನ್ನೇ ಟೀಕೆ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ಅವರ ಮೊಮ್ಮಗನ ಪಾದ ಪೂಜೆ ಮಾಡಲು ಸಿದ್ಧವಾಗಿರೋದು ಬೇಸರ ತಂದಿದೆ. ಸಿಎಂ ಸಿದ್ದರಾಮಯ್ಯ ಅವರೇ ನೀವು ಹುಲಿಯಾನಾ‌ ಇಲಿಯಾನಾ ಹೇಳಿ? ಕಳೆದ 2013ರಲ್ಲಿ ಸಿದ್ದರಾಮಯ್ಯ ಹುಲಿಯಾ ಆಗಿದ್ದರು. ಈಗ ಸಿದ್ದರಾಮಯ್ಯ ಇಲಿಯಾಗಿದ್ದಾರೆ. ರಾಹುಲ್‌ ಗಾಂಧಿ ಭೇಟಿಗೆ ಸಿದ್ದರಾಮಯ್ಯ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ ಎಂದು ಹೇಳಿದರು.

ಇದನ್ನು ಓದಿ: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯ

ಇನ್ನು ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾವಂತರೆ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಇದು ಬಹಳ ಅಪಾಯಕಾರಿ. ಮುಸ್ಲಿಂಮರ ಸಮಸ್ಯೆ ಬಡತನ ಅಲ್ಲ.‌ ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೆ ಅವರ ಸಮಸ್ಯೆ. ವಿದ್ಯಾವಂತ ಮುಸ್ಲಿಂಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರಾ? ಸಿದ್ದರಾಮಯ್ಯರಂತಹ ನಾಯಕರು ಇರುವಾಗ ದೇಶದ ಒಳಗೆ ಇಂತಹ ಪರಿಸ್ಥಿತಿಯನ್ನು ನಾವು ಎದುರಿಸಲೇಬೇಕು.

ಸಿದ್ದರಾಮಯ್ಯ ಸರ್ಕಾರದ ಯೋಗ್ಯತೆಗೆ ಜೈಲಿನಲ್ಲಿನ ಭಯೋತ್ಪಾದಕನನ್ನೆ ಬಿಗಿ ಹಿಡಿಯಲು ಆಗುತ್ತಿಲ್ಲ. ಇನ್ನೂ ಇವರೇನೂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡೋದು. ಯುಪಿಎ ಸರಕಾರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ ಮೊದಲ ದೊಡ್ಡ ಸ್ಫೋಟ ಇದು. ಭಾರತದ ಒಳಗಿನ ಮುಲ್ಲಾಗಳೇ ಈ ರೀತಿಯ ಸ್ಫೋಟಕ್ಕೆ ತಯಾರಾಗುತ್ತಿದ್ದಾರೆ. ಮೊದಲು ಭಾರತದೊಳಗೆ ಬಾಂಬ್ ಇಡಲು ಪಾಕಿಸ್ತಾನದಿಂದ ಬರುತ್ತಿದ್ದರು. ಈಗ ನಮ್ಮ ದೇಶದೊಳಗೆ ಇಂತವರು ತಯಾರಾಗಿದ್ದಾರೆ. ದೇಶದ ಒಳಗಡೆ ಇಡುವವರೆ ಬಾಂಬ್ ಇಡಲು ಹೊರಟರೆ ಮೋದಿ ಅದನ್ನು ತಡಿಯಲು ಆಗುತ್ತಾ? ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

6 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

8 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

9 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

11 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

16 hours ago