ತನ್ನ ಅವಧಿಯಲ್ಲಿ ಪಾರ್ವತಿ ಸಿದ್ದರಾಮಯ್ಯಗೆ ನಿವೇಶನಗಳನ್ನು ನೀಡಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವ ಕುಮಾರ್‌

ಮೈಸೂರು: ಮುಡಾದಲ್ಲಿ ತಾನು ಅಧ್ಯಕ್ಷನಾಗಿದ್ದಾಗ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಯಾವುದೇ ನಿವೇಶನಗಳನ್ನು ನೀಡಿಲ್ಲ ಎಂದು ಮುಡಾ ಮಾಜಿ ಅಧ್ಯಕ್ಷ ಡಿ.ಧ್ರುವ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಇಂದು(ನ.19) ಮೈಸೂರು ಲೋಕಾಯುಕ್ತ ಅಧಿಕಾರಗಳ ಕಚೇರಿಯ ಮುಂದೆ ವಿಚಾರಣೆ ಮುಗಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಡಾ ಸಭೆಯಲ್ಲಿ 50:50 ಅನುಪಾತದ ಬದಲಿ ನಿವೇಶನಗಳನ್ನು ನೀಡುವುದಾಗಿ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಯಿತು. ನಂತರ ನಿಮ್ಮ ಪತ್ನಿ ಪಾರ್ವತಿ ಅವರ 3.14 ಎಕರೆ ಜಮೀನು ಅನ್ನು ಕಚೇರಿಯಿಂದ ವಶಪಡಿಸಿಕೊಳ್ಳಲಾಗಿದೆ. ಆ ಕಾರಣಕ್ಕಾಗಿ ಅವರಿಗೆ ಬದಲಿ ನಿವೇಶನಗಳನ್ನು ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿ ಅಂದಿನ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಬಳಿ ಕೇಳಿದಾಗ ಅವರು ನಾನು ರಾಜ್ಯದಲ್ಲಿ ಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನು ಯಾವುದೇ ಕಾರಣಕ್ಕೂ ಮುಡಾ ವ್ಯವಹಾರದಲ್ಲಿ ಭಾಗಿಯಾಗುವುದಿಲ್ಲ. ನಮಗೆ ಮುಡಾದಿಂದ ಯಾವುದೇ ನಿವೇಶನಗಳು ಸಹ ಬೇಡವೆಂದು ತಿಳಿಸಿದ್ದರು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ನನ್ನ ಅವಧಿಗೂ ಮುಂಚೆಯಿಂದಲೇ 50:50 ಅನುಪಾತದ ಬದಲಿ ನಿವೇಶನಗಳು ಜಾರಿಯಲ್ಲಿದ್ದವು. ಆದರೆ ನಾನು ಅಧಿಕಾರ ನಿರ್ವಹಿಸುವಾಗ ಯಾವುದೇ 50:50 ಅನುಪಾತವಾಗಲಿ ಅಥವಾ 10 *10 ಆಗಲಿ ಯಾವುದೇ ನಿವೇಶನಗಳನ್ನು ಯಾರಿಗೂ ಮಂಜೂರು ಮಾಡಿಲ್ಲ. ನನ್ನ ಅವಧಿ ಮುಗಿದ ಮೇಲೆ ಮುಡಾದಲ್ಲಿ ಏನೆಲ್ಲಾ ಆಗಿದೆ ಎಂಬುದರ ಬಗ್ಗೆ ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

50 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago