ಮೈಸೂರು: ಮುಡಾದಲ್ಲಿ ತಾನು ಅಧ್ಯಕ್ಷನಾಗಿದ್ದಾಗ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಯಾವುದೇ ನಿವೇಶನಗಳನ್ನು ನೀಡಿಲ್ಲ ಎಂದು ಮುಡಾ ಮಾಜಿ ಅಧ್ಯಕ್ಷ ಡಿ.ಧ್ರುವ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಇಂದು(ನ.19) ಮೈಸೂರು ಲೋಕಾಯುಕ್ತ ಅಧಿಕಾರಗಳ ಕಚೇರಿಯ ಮುಂದೆ ವಿಚಾರಣೆ ಮುಗಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಡಾ ಸಭೆಯಲ್ಲಿ 50:50 ಅನುಪಾತದ ಬದಲಿ ನಿವೇಶನಗಳನ್ನು ನೀಡುವುದಾಗಿ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಯಿತು. ನಂತರ ನಿಮ್ಮ ಪತ್ನಿ ಪಾರ್ವತಿ ಅವರ 3.14 ಎಕರೆ ಜಮೀನು ಅನ್ನು ಕಚೇರಿಯಿಂದ ವಶಪಡಿಸಿಕೊಳ್ಳಲಾಗಿದೆ. ಆ ಕಾರಣಕ್ಕಾಗಿ ಅವರಿಗೆ ಬದಲಿ ನಿವೇಶನಗಳನ್ನು ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿ ಅಂದಿನ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಬಳಿ ಕೇಳಿದಾಗ ಅವರು ನಾನು ರಾಜ್ಯದಲ್ಲಿ ಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನು ಯಾವುದೇ ಕಾರಣಕ್ಕೂ ಮುಡಾ ವ್ಯವಹಾರದಲ್ಲಿ ಭಾಗಿಯಾಗುವುದಿಲ್ಲ. ನಮಗೆ ಮುಡಾದಿಂದ ಯಾವುದೇ ನಿವೇಶನಗಳು ಸಹ ಬೇಡವೆಂದು ತಿಳಿಸಿದ್ದರು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ನನ್ನ ಅವಧಿಗೂ ಮುಂಚೆಯಿಂದಲೇ 50:50 ಅನುಪಾತದ ಬದಲಿ ನಿವೇಶನಗಳು ಜಾರಿಯಲ್ಲಿದ್ದವು. ಆದರೆ ನಾನು ಅಧಿಕಾರ ನಿರ್ವಹಿಸುವಾಗ ಯಾವುದೇ 50:50 ಅನುಪಾತವಾಗಲಿ ಅಥವಾ 10 *10 ಆಗಲಿ ಯಾವುದೇ ನಿವೇಶನಗಳನ್ನು ಯಾರಿಗೂ ಮಂಜೂರು ಮಾಡಿಲ್ಲ. ನನ್ನ ಅವಧಿ ಮುಗಿದ ಮೇಲೆ ಮುಡಾದಲ್ಲಿ ಏನೆಲ್ಲಾ ಆಗಿದೆ ಎಂಬುದರ ಬಗ್ಗೆ ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…