ಮೈಸೂರು ನಗರ

ನಾನು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ

ಮೈಸೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಚಾಮುಂಡಿ ತಾಯಿಗೆ ಅವಮಾನಿಸಿ ಮಹಿಷ ದಸರಾ ಮಾಡಲು ಮುಂದಾಗಿದ್ದರು. ಅಂದು ಕೂಡ ಅದನ್ನು ವಿರೋಧ ಮಾಡಿದ್ದು, ಮಹಿಷ ದಸರಾ ಮಟ್ಟ ಹಾಕಿದ್ದು ನಾನು. ಅರಮನೆ ಕೂಡ ಅದರ ಬಗ್ಗೆ ಚಕಾರ ಎತ್ತಲಿಲ್ಲ. ಪ್ರತಾಪ್ ಸಿಂಹ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಅನಿವಾರ್ಯತೆ ಇಲ್ಲ. ನನ್ನ ತಂದೆ ಕೂಡ ಜನಸಂಘದಿಂದ ಬಂದಿರೋರು. ನಾನು ಕಾಂಗ್ರೆಸ್‌ಗೆ ಹೋಗಬೇಕು ಅಂತಿದ್ರೆ ಚುನಾವಣೆ ಸಮಯದಲ್ಲೇ ಹೋಗ್ತಿದ್ದೆ. ಟಿಕೆಟ್ ಕೊಡ್ತೀವಿ ಬನ್ನಿ ಅಂತ ಸಾಕಷ್ಟು ಜನ ಕರೆದ್ರು ಅಂತಹ ಸಮಯದಲ್ಲೇ ಹೋಗಲಿಲ್ಲ ಎಂದು ಹೇಳಿದರು.

ಇನ್ನು ವಿ.ಸೋಮಣ್ಣ ವರುಣದಲ್ಲಿ ಚುನಾವಣೆ ನಿಂತಾಗ ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದವನು ನಾನು. ನನ್ನ ಮೇಲೆ ಸಾಕಷ್ಟು ಕೇಸ್ ಹಾಕಿಸಿದ್ರು. ಈಗಲೂ ಸಹ ಕೇಸ್ ಹಾಕಿಸಿದ್ದಾರೆ. ನಾನು ಬದ್ಧತೆಯಿರುವ ವ್ಯಕ್ತಿ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದ ಕೆಲವರು ಬಕೆಟ್ ಹಿಡಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಮಾತು ಸಭ್ಯತೆ ಮೀರಬಾರದು ಎಂದು ಸ್ವಪಕ್ಷದ ನಾಯಕರ ಹೇಳಿಕೆಗೆ ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

42 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

44 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

46 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

49 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

53 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

57 mins ago